Advertisement

By Election; ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ಒಲವು ಬಿಜೆಪಿ ಕಡೆಗೆ: ಶಾಸಕ ಭರತ್‌ ಶೆಟ್ಟಿ

11:14 AM Oct 21, 2024 | Team Udayavani |

ಮಂಗಳೂರು: ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಂದ ತೆರವಾದ ವಿಧಾನ ಪರಿಷತ್ ಸ್ಥಾನಕ್ಕೆ ಉಪಚುನಾವಣೆ ಸೋಮವಾರ (ಅ.21) ನಡೆಯುತ್ತಿದ್ದು, ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮಂಗಳೂರು ಮಹಾನಗರ ಪಾಲಿಕೆಯ ಕಚೇರಿಯಲ್ಲಿರುವ ಬೂತ್ ನಲ್ಲಿ ಮತ ಚಲಾಯಿಸಿದರು.

Advertisement

ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಮನೋಜ್ ಕುಮಾರ್ ಹಾಗೂ ಸದಸ್ಯರು ಹಾಜರಿದ್ದು, ಶಾಸಕರೊಂದಿಗೆ ಮತ ಚಲಾಯಿಸಿದರು.

ಈ ಸಂದರ್ಭ ಮಾತನಾಡಿದ ಡಾ.ಭರತ್ ಶೆಟ್ಟಿ ವೈ ಅವರು, ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಬೊಟ್ಯಾಡಿ ಸ್ಪರ್ಧಿಸುತ್ತಿದ್ದು ಅತ್ಯಧಿಕ ಮತದೊಂದಿಗೆ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.

ಕೋಟ ಶ್ರೀನಿವಾಸ ಪೂಜಾರಿಯವರು ಬಿಜೆಪಿ ಸರಕಾರದ ಅವಧಿಯಲ್ಲಿ ಶಾಸಕರಾಗಿ, ಸಚಿವರಾಗಿ ಉಭಯ ಜಿಲ್ಲೆಯಲ್ಲಿ ಉತ್ತಮ ಕೆಲಸ ಕಾರ್ಯಗಳನ್ನು ಮಾಡಿದ್ದಾರೆ.

Advertisement

ವಿಶೇಷವಾಗಿ ಗ್ರಾಮ ಪಂಚಾಯತ್ ಜಿಲ್ಲಾ ಪಂಚಾಯತ್ ವ್ಯಾಪ್ತಿಗಳಲ್ಲಿ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡಿ ಅನುದಾನಗಳನ್ನ ಬಿಡುಗಡೆ ಮಾಡಿ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಕೊಡುಗೆ ನೀಡಿದ್ದಾರೆ.  ಹೀಗಾಗಿ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ಒಲವು ಬಿಜೆಪಿ ಕಡೆಗೆ ಇದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next