Advertisement

‘ಉಪ ಚುನಾವಣ ಫ‌ಲಿತಾಂಶ ಪಕ್ಷಕ್ಕೆ ಟಾನಿಕ್‌’

03:05 AM Dec 24, 2018 | Team Udayavani |

ಜಮಖಂಡಿ: ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ಮತದಾರರು ಭಾರೀ ಅಂತರದಿಂದ ಕಾಂಗ್ರೆಸ್‌ನ್ನು ಗೆಲ್ಲಿಸಿದ್ದರ ಪರಿಣಾಮ ದೇಶದ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಮೇಲೂ ಪರಿಣಾಮ ಬೀರಿತು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್‌ ಹೇಳಿದರು. ಜಮಖಂಡಿ ವಿಧಾನಸಭೆ ಮತ್ತು ಬಳ್ಳಾರಿ ಲೋಕಸಭೆ ಉಪಚುನಾವಣೆಯಲ್ಲಿ ನಾವು ನಿರೀಕ್ಷೆ ಮಾಡದಷ್ಟು ದೊಡ್ಡ ಮಟ್ಟದ ಫಲಿತಾಂಶವನ್ನು ಈ ಕ್ಷೇತ್ರದ ಜನರು ನೀಡಿದ್ದಾರೆ. ಇದರ ಪರಿಣಾಮ ಬಿರುಗಾಳಿಯಾಗಿ ಪರಿವರ್ತನೆಯಾಗಿತ್ತು. ಅದು ಈಚೆಗೆ ನಡೆದ 5 ರಾಜ್ಯಗಳ ಚುನಾವಣೆ ಫಲಿತಾಂಶದ ಮೇಲೂ ಬೀರಿತ್ತು ಎಂದು ಅವರು ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next