Advertisement

ರಿಜ್ವಾನ್ ಅರ್ಷದ್ ಸ್ಪರ್ಧೆಗೆ ಸ್ಥಳೀಯ ನಾಯಕರ ತೀವ್ರ ವಿರೋಧ

04:04 PM Sep 25, 2019 | Sriram |

ಬೆಂಗಳೂರು: 17 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗಳ ವಿಚಾರಕ್ಕೆ ಸಂಬಂಧಿಸಿದಂತೆ ಶಿವಾಜಿ ನಗರ ಕ್ಷೇತ್ರದಿಂದ ರಿಜ್ವಾನ್ ಅರ್ಷದ್ ಸ್ಪರ್ಧೆಗೆ ಸ್ಥಳೀಯ ನಾಯಕರ ತೀವ್ರ ವಿರೋಧ ವ್ಯಕ್ತಪಡಿಸಿದ ಘಟನೆ ಬುಧವಾರ ನಡೆದಿದೆ.

Advertisement

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸಭೆಯಲ್ಲಿ ಶಿವಾಜಿ ನಗರ ಕ್ಷೇತ್ರದಲ್ಲಿ ರಿಜ್ವಾನ್ ಅರ್ಷದ್ ಸ್ಪರ್ಧೆಗೆ ಸ್ಥಳೀಯ ನಾಯಕರ ತೀವ್ರ ವಿರೋಧ ವ್ಯಕ್ತಪಡಿಸಿ ಅವರಿಗೆ ಟಿಕೆಟ್‌ ನೀಡಬೇಡಿ. ಹಿಂದೂ ಮತದಾರರನ್ನು ಶಿವಾಜಿ ನಗರದಲ್ಲಿ ಕಡೆಗಣನೆ ಮಾಡಲಾಗುತ್ತಿದೆ ಎಂದು ಸ್ಥಳೀಯ ಮುಖಂಡರು ಸಿದ್ದರಾಮಯ್ಯ ಮುಂದೆಯೇ ತೀವ್ರ ಅಸಮಾಧಾನ ಹೊರಹಾಕಿದರು.

ಎಐಸಿಸಿ ಕಾರ್ಯದರ್ಶಿ ಸಲಿಂ ಅಹ್ಮದ್, ಟಿಕೆಟ್ ಅಕಾಂಕ್ಷಿ ಹುಸೇನ್ , ರೆಹಮಾನ್ ಷರೀಷ್, ಬಿ.ಆರ್. ನಾಯ್ಡು ರಿಂದ ರಿಜ್ವಾನ್ ಸ್ಪರ್ಧೆಗೆ ತೀವ್ರ ವಿರೋಧಿಸಿದ್ದಾರೆ.

ಈ ನಡುವೆ ಶಿವಾಜಿ ನಗರದಲ್ಲಿ ಅಲ್ಪ ಸಂಖ್ಯಾತರನ್ನು ಹೊರತುಪಡಿಸಿ ಬೇರೆಯವರಿಗೆ ಟಿಕೇಟ್ ನೀಡಲಾಗದು ಎಂದು ಸಿದ್ದರಾಮಯ್ಯ ಹೇಳಿದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next