Advertisement

By Election; ಮೂರು ಕ್ಷೇತ್ರಕ್ಕೆ ಶೀಘ್ರ ಅಭ್ಯರ್ಥಿಗಳು ಅಂತಿಮ: ಸಚಿವ ಲಾಡ್

12:50 PM Oct 21, 2024 | Team Udayavani |

ಧಾರವಾಡ: ಉಪ ಚುನಾವಣೆ ಟಿಕೆಟ್ ಹಂಚಿಕೆ ಕುರಿತು ಕಾಂಗ್ರೆಸ್ ನಿಂದ ನಿನ್ನೆ ಸಿಎಂ ಸಭೆ ಕರೆದು ಸಚಿವರು ಹಾಗೂ ಡಿಸಿಎಂ ಜೊತೆ ಚರ್ಚೆ ಮಾಡಿದ್ದಾರೆ. ನಾವೆಲ್ಲ ನಮ್ಮ ಅಭಿಪ್ರಾಯ ಮಂಡನೆ ಮಾಡಿದ್ದೇವೆ. ಇವತ್ತು ಅಥವಾ ನಾಳೆ ಹೈಕಮಾಂಡ್ ನಿಂದ ಅಂತಿಮ ತೀರ್ಮಾನ ಬರಲಿದೆ ಎಂದು ಸಚಿವ ಸಂತೋಷ್ ಲಾಡ್ ಹೇಳಿದರು.

Advertisement

ಶಿಗ್ಗಾಂವಿ ಟಿಕೆಟ್ ನಲ್ಲಿಯೂ ಗೊಂದಲ ವಿಚಾರ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿ, ನಮ್ಮ ನಮ್ಮ ಅಭಿಪ್ರಾಯ ಈಗಾಗಲೇ ಹೇಳಿದ್ದೇವೆ. ಕೊನೆಯದಾಗಿ ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆಯೋ ಅದೇ ಫೈನಲ್ ಎಂದು ಸ್ಪಷ್ಟಪಡಿಸಿದರು.

ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ಗೆ ಕಾಂಗ್ರೆಸ್ ಕರೆತರುವ ವಿಚಾರಕ್ಕೆ ಮಾತನಾಡಿದ ಅವರು, ನನಗೆ ಆಗ ಭಾಗದಲ್ಲಿ ಜಾಸ್ತಿ ಮಾಹಿತಿ ಇಲ್ಲ. ನಮ್ಮ ಅಧ್ಯಕ್ಷರೇ ಅಲ್ಲಿ ಜವಾಬ್ದಾರಿ ಇದೆ ಸಿಎಂ ಗೂ ಜವಾಬ್ದಾರಿ ಅಲ್ಲಿದೆ. ಹೈಕಮಾಂಡ್ ಜೊತೆ ಮಾತನಾಡಿ, ಅವರೇ ಫೈನಲ್ ಮಾಡ್ತಾರೆ. ಅದರ ಬಗ್ಗೆ ನನಗೆ ಜಾಸ್ತಿ ಮಾಹಿತಿ ಇಲ್ಲ. ಈ ಬಾರಿ ಮೂರಕ್ಕೆ ಮೂರು ಸ್ಥಾನ ಗೆಲ್ಲುತ್ತೇವೆ. ಚನ್ನಪಟ್ಟಣ ಲೋಕಸಭೆ ಚುನಾವಣೆಯಲ್ಲಿ ಮುನ್ನಡೆ ಪಡೆದಿದ್ದೆವು. ಶಿಗ್ಗಾಂವಿ ಸಹ ಲೀಡ್ ಆಗಿದ್ದೇವೆ. ಸಂಡೂರು ಸಹ ಎರಡು ಬಾರಿ ಲೀಡ್ ಪಡೆದಿದ್ದೇವೆ. ಹೀಗಾಗಿ ನಗೆ ನಂಬಿಕೆ ಇದೆ. ಉಪ ಚುನಾವಣೆಯಲ್ಲಿ ಮೂರಕ್ಕೆ ಮೂರು ನಾವು ಗೆಲ್ಲುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next