Advertisement

ಉಪಚುನಾವಣೆ ಗೆಲುವಿನ ಹಾದಿ ಸುಗಮ: ಡಿವಿಎಸ್‌

11:00 AM Nov 11, 2019 | Team Udayavani |

ಮಂಗಳೂರು: ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ನಡೆಯುವ ಉಪಚುನಾವಣೆಗೆ ಬಿಜೆಪಿ ಸರ್ವ ಸನ್ನದ್ಧವಾಗಿದ್ದು, ಹದಿನೈದರಲ್ಲೂ ಗೆಲುವು ಸಾಧಿಸಲಿದೆ ಎಂದು ಕೇಂದ್ರ ಸಚಿವ ಸದಾನಂದ ಗೌಡ ಹೇಳಿದರು.

Advertisement

ರವಿವಾರ ಮಂಗಳೂರಿಗೆ ಭೇಟಿ ನೀಡಿದ ಸಂದರ್ಭ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಜಯ ಗಳಿಸುವ ನಿಟ್ಟಿನಲ್ಲಿ ತಳಮಟ್ಟದಿಂದಲೇ ಕೆಲಸಗಳು ನಡೆಯುತ್ತಿವೆ ಎಂದರು.

ಮಹಾರಾಷ್ಟ್ರದಲ್ಲಿ ಸೋಮವಾರ ರಾಜ್ಯಪಾಲರು ಸರಕಾರ ರಚನೆಗೆ ಆಹ್ವಾನಿಸಿದ್ದಾರೆ. ದೇವೇಂದ್ರ ಫ‌ಡ್ನವೀಸ್‌ ಬಹುಮತ ಗಳಿಸುತ್ತಾರೆ. ಬಿಜೆಪಿ ಮತ್ತು ಶಿವಸೇನೆಯ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಇರುವ ಗೊಂದಲವನ್ನು ಹೈಕಮಾಂಡ್‌ ಬಗೆಹರಿಸಲಿದೆ ಎಂದರು.

ಸಿದ್ದರಾಮಯ್ಯ ಅವರು ವಿಪಕ್ಷದ ನಾಯಕರಾಗಿ ಕಾಂಗ್ರೆಸ್‌ ಪಕ್ಷವನ್ನೇ ಮುಗಿಸುವ ರೀತಿಯಲ್ಲಿದ್ದಾರೆ ಎಂಬಂತೆ ಭಾಸವಾಗುತ್ತದೆ ಎಂದು ಡಿ.ವಿ. ಸದಾನಂದ ಗೌಡ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next