Advertisement

By Election: ವಿಜಯೇಂದ್ರರಿಂದ ಚನ್ನಪಟ್ಟಣ ಟಿಕೆಟ್‌ ನೀಡುವ ಭರವಸೆ: ಸಿಪಿವೈ

12:59 AM Aug 22, 2024 | Team Udayavani |

ರಾಮನಗರ: ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನನಗೆ ಟಿಕೆಟ್‌ ನೀಡುವುದಾಗಿ ಭರವಸೆ ನೀಡಿದ್ದಾರೆ. ಕೇಂದ್ರ ಸಚಿವ ಕುಮಾರಸ್ವಾಮಿ ಕ್ಷೇತ್ರವಾಗಿರುವ ಕಾರಣ ವರಿಷ್ಠರ ಜತೆ ಮಾತನಾಡಿ ಅಂತಿಮ ತೀರ್ಮಾನ ಮಾಡುವುದಾಗಿ ಹೇಳಿದ್ದಾರೆ ಎಂದು ಎಂಎಲ್‌ಸಿ ಸಿ.ಪಿ.ಯೋಗೇಶ್ವರ್‌ ತಿಳಿಸಿದರು.

Advertisement

ಪತ್ರಕರ್ತರೊಂದಿಗೆ ಮಾತನಾಡಿ, ಚನ್ನಪಟ್ಟಣ ಬಿಜೆಪಿ ಗೆಲ್ಲಲಿರುವ ಕ್ಷೇತ್ರವಾಗಿದ್ದು, ಎರಡೂ ಪಕ್ಷದ ನಾಯಕರಿಗೂ ಈ ವಿಷಯವನ್ನು ಮನದಟ್ಟು ಮಾಡಿ ನನಗೆ ಟಿಕೆಟ್‌ ಕೊಡಿ ಎಂದು ಕೇಳಿದ್ದೇನೆ. ಜತೆಗೆ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ. ಮುಂದಿನ ವಾರ ಎಲ್ಲ ಗೊಂದಲಕ್ಕೂ ತೆರೆ ಬೀಳಲಿದೆ ಎಂದರು.

ಕುಮಾರಸ್ವಾಮಿ ಮತ್ತು ಬಿ.ವೈ.ವಿಜಯೇಂದ್ರ ಜವಾಬ್ದಾರಿ ತೆಗೆದುಕೊಂಡು ಕ್ಷೇತ್ರದ ಚುನಾವಣೆ ಮಾಡಬೇಕು. ನಾನು ಸ್ಪರ್ಧೆ ಮಾಡಿಯೇ ತೀರುತ್ತೇನೆ. ಆದರೆ, ನನ್ನ ಆದ್ಯತೆ ಮಾತೃಪಕ್ಷ ಬಿಜೆಪಿಗೆ, ಟಿಕೆಟ್‌ ಸಿಗಲಿಲ್ಲ ಎಂದರೆ ಮುಂದಿನ ನಡೆ ಬಗ್ಗೆ ಯೋಚನೆ ಮಾಡುತ್ತೇನೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next