Advertisement

By Poll: ಯೋಗೇಶ್ವರ್‌ ದುಡುಕಿದ್ರು, ಎನ್‌ಡಿಎ ಅಭ್ಯರ್ಥಿ ಸ್ಪರ್ಧೆ ಖಚಿತ: ಆರ್‌.ಅಶೋಕ್‌

10:24 PM Oct 21, 2024 | Team Udayavani |

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸ್ಪರ್ಧೆ ಮಾಡಲಿದ್ದಾರೆ. ಯೋಗೇಶ್ವರ್‌ ಮನವೊಲಿಸಲು ನಾನು ಪ್ರಯತ್ನಿಸಿದ್ದೆ. ಅವರು ದುಡುಕಿದರು ಎನ್ನಿಸುತ್ತಿದೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಅಭಿಪ್ರಾಯಪಟ್ಟಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿ, ಚನ್ನಪಟ್ಟಣ ಕ್ಷೇತ್ರದ ಟಿಕೆಟ್‌ ಸಂಬಂಧ ಇನ್ನೂ ಅಂತಿಮ ನಿರ್ಧಾರ ಆಗಿಲ್ಲ. ಯೋಗೇಶ್ವರ್‌ ಅವರಿಗೆ ಟಿಕೆಟ್‌ ನೀಡಬೇಕೆಂದು ಹಿರಿಯ ನಾಯಕರಿಗೆ ಮನವಿ ಮಾಡಿದ್ದೇವೆ. ಈ ಹಿಂದೆ ಕ್ಷೇತ್ರದಲ್ಲಿ ಎಚ್‌.ಡಿ.ಕುಮಾರಸ್ವಾಮಿ ಶಾಸಕರಾಗಿದ್ದು ಅವರ ತೀರ್ಮಾನ ಪ್ರಮುಖವಾಗಿರುತ್ತದೆ. ಯೋಗೇಶ್ವರ್‌ ತಪ್ಪು ತೀರ್ಮಾನ ಕೈಗೊಳ್ಳುತ್ತಾರೆಂದು ನನಗೆ ಅನ್ನಿಸುತ್ತಿಲ್ಲ. ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಗೆ ಟಿಕೆಟ್‌ ಸಿಗಬಹುದು ಎಂದರು.

ನಿಖಿಲ್‌ ಕುಮಾರಸ್ವಾಮಿ ಅವರು ಈಗಾಗಲೇ ಸ್ಪರ್ಧೆ ಮಾಡಲ್ಲ ಎಂದು ಹೇಳಿದ್ದಾರೆ. ಸೀಟು ಅವರದ್ದೇ ಆಗಿರುವುದರಿಂದ ಹಾಗೂ ಎನ್‌ಡಿಎ ಪಾರ್ಟನರ್‌ ಆಗಿರುವುದರಿಂದ ಜೆಡಿಎಸ್‌ನವರ ಸಲಹೆ ಪ್ರಮುಖವಾಗಿರುತ್ತದೆ. ಇನ್ನು ಎರಡು ದಿನದಲ್ಲಿ ಎಲ್ಲವೂ ತೀರ್ಮಾನವಾಗಲಿದೆ. ಡಿ.ಕೆ.ಶಿವಕುಮಾರ್‌ ಅವರ ಸಹೋದರ ಲೋಕಸಭಾ ಚುನಾವಣೆಯಲ್ಲಿ ಸೋತಿದ್ದಾರೆ. ಅವರು ಯಾರನ್ನೋ ಕರೆದುಕೊಂಡು ಬರುತ್ತೇನೆ ಎಂದು ಹೇಳಬಹುದು. ಆದರೆ, ಅಂತಿಮವಾಗಿ ಎಲ್ಲವನ್ನೂ ಜನರು ತೀರ್ಮಾನಿಸುತ್ತಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next