Advertisement

By Polls: ಚನ್ನಪಟ್ಟಣ ಕ್ಷೇತ್ರದಲ್ಲಿ ನಾನೇ ಅಭ್ಯರ್ಥಿ: ಡಿ.ಕೆ. ಶಿವಕುಮಾರ್‌

02:03 AM Oct 14, 2024 | Team Udayavani |

ಮೈಸೂರು: ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಯಲ್ಲಿ ನಮ್ಮ ಕುಟುಂಬದಿಂದ ಯಾರೂ ಸ್ಪರ್ಧಿಸುವುದಿಲ್ಲ. ನನ್ನ ಹೆಸರೇ ಓಡಾಡುತ್ತಿದ್ದು ನಾನೇ ಅಭ್ಯರ್ಥಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿ, ಚನ್ನಪಟ್ಟಣದಲ್ಲಿ ನಾವು ವೇದಿಕೆ ಸಿದ್ಧ ಮಾಡಿಕೊಳ್ಳುತ್ತಿದ್ದೇವೆ. ಲೋಕಸಭೆ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಹಿನ್ನಡೆ ಆಗಿತ್ತು. ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚು ಹಿನ್ನಡೆ ಅನುಭವಿಸಿರುವ ಕಾರಣ ನಮ್ಮ ನೆಲೆಯನ್ನು ಭದ್ರ ಮಾಡಿಕೊಳ್ಳುತ್ತಿದ್ದೇವೆ. ಜನರು ಕೈ ಹಿಡಿಯುತ್ತಾರೆ ಎಂಬ ವಿಶ್ವಾಸವಿದೆ ಎಂದರು.

ನಿಖಿಲ್‌ ಕುಮಾರಸ್ವಾಮಿ ಸ್ಪರ್ಧೆ ವಿಚಾರ ನನಗೆ ಗೊತ್ತಿಲ್ಲ. ಅದರ ಬಗ್ಗೆ ನಮಗೇನೂ ಚಿಂತೆಯಿಲ್ಲ. ಚನ್ನಪಟ್ಟಣದಲ್ಲಿ ವ್ಯಕ್ತಿಯ ಮೇಲೆ ಚುನಾವಣೆ ನಡೆಯುವುದಿಲ್ಲ. ಪಕ್ಷದ ಸಿದ್ಧಾಂತದ ಮೇಲೆ ಚುನಾವಣೆ ನಡೆಸಲು ನಾವು ಹೊರಟಿದ್ದೇವೆ. ಬಿಜೆಪಿಯವರಾದರೂ ಅಭ್ಯರ್ಥಿಯಾಗಲಿ, ಜೆಡಿಎಸ್‌ ಅವರಾದರೂ ಆಗಲಿ ನಮಗೇನೂ ಅಭ್ಯಂತರವಿಲ್ಲ. ನಮ್ಮ ಮನೆಯನ್ನು ನಾವು ದುರಸ್ತಿ ಮಾಡಿಕೊಂಡರೆ ಸಾಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next