Advertisement

ಶಿವಮೊಗ್ಗ ಕ್ಷೇತ್ರದಿಂದ ಬಿ.ವೈ.ರಾಘವೇಂದ್ರ ಸ್ಪರ್ಧೆ ಖಚಿತ

06:25 AM Oct 07, 2018 | Team Udayavani |

ಶಿಕಾರಿಪುರ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿ.ವೈ.ರಾಘವೇಂದ್ರ ಅವರು ಕಣಕ್ಕಿಳಿಯೋದು ಬಹುತೇಕ ಖಚಿತವಾಗಿದೆ. ಉಪ ಚುನಾವಣೆಯ ದಿನಾಂಕ ಘೋಷಣೆಯಾಗುತ್ತಿದ್ದಂತೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ, ಬಿಜೆಪಿಯಿಂದ ಬಿ.ವೈ.ರಾಘವೇಂದ್ರ ಅವರೇ ಅಭ್ಯರ್ಥಿಯಾಗಲಿದ್ದಾರೆ ಎಂದು ಪರೋಕ್ಷವಾಗಿ ಹೇಳಿದರು.

Advertisement

ತಾಲೂಕಿನ ಮಾರವಳ್ಳಿ ಗ್ರಾಮದಲ್ಲಿ ವಿವಿಧ ಏತ ನೀರಾವರಿ ಯೋಜನೆಯ ಸರ್ವೇ ಕಾರ್ಯಕ್ಕೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಬಿಎಸ್‌ವೈ ಹಾಗೂ ಅವರ ಪುತ್ರ ಬಿ.ವೈ.ರಾಘವೇಂದ್ರ ಇಬ್ಬರೂ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದಾಗಲೇ ಶಿವಮೊಗ್ಗ ಲೋಕಸಭಾ ಉಪ ಚುನಾವಣೆ ದಿನಾಂಕ ಘೋಷಣೆಯಾದ ವಿಷಯ ತಿಳಿಯಿತು. ಇದನ್ನು ಕೇಳುತ್ತಿದ್ದಂತೆ ಭಾವಪರವಶರಾದ ಯಡಿಯೂರಪ್ಪ, ಚುನಾವಣೆ ಮೇ ತಿಂಗಳಲ್ಲಿ ಘೋಷಣೆ ಆಗಬಹುದು ಅಂದುಕೊಂಡಿದ್ದೆ. ನ.3 ರಂದು ಚುನಾವಣೆ ನಡೆಯಲಿದೆ. ಈ ಬಾರಿ ಮಾಜಿ ಶಾಸಕ ಬಿ.ವೈ.ರಾಘವೇಂದ್ರ ಅವರನ್ನು ಕ್ಷೇತ್ರದ ಮತದಾರರು ಅತ್ಯಂತ ಹೆಚ್ಚಿನ ಮತಗಳಿಂದ ಆರಿಸಿ ಲೋಕಸಭೆಗೆ ಕಳುಹಿಸಬೇಕು ಎಂದರು.

ಚುನಾವಣೆಗೆ ಸಮಯ ತುಂಬಾ ಕಡಿಮೆ ಇರುವುದರಿಂದ ರಾಘವೇಂದ್ರ ಅವರು ಬೈಂದೂರು ಸೇರಿ 8 ಕ್ಷೇತ್ರಗಳಲ್ಲಿ ಪ್ರವಾಸ ಮಾಡಬೇಕಾಗಿದೆ. ಅದಕ್ಕೆ ಪೂರಕವಾಗಿ ನಿಮ್ಮೆಲ್ಲರ ಆರ್ಶೀರ್ವಾದ ಬೇಕು ಎನ್ನುವ ಮೂಲಕ ತಮ್ಮ ಪುತ್ರನನ್ನು ಕಣಕ್ಕಿಳಿಸುವದನ್ನು ಘೋಷಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next