Advertisement

ಭದ್ರಾಜಲಾಶಯಕ್ಕೆ ಬಾಗೀನ ಅರ್ಪಿಸಿದ ಸಂಸದ ಬಿ.ವೈ.ರಾಘವೇಂದ್ರ

11:55 AM Sep 10, 2019 | sudhir |

ಶಿವಮೊಗ್ಗ: 186 ಅಡಿ ಸಾಮರ್ಥ್ಯದ ಭದ್ರಾ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಬಾಗೀನ ಅರ್ಪಿಸಿದರು.

Advertisement

ಭದ್ರಾಜಲಾಶಯ ಭರ್ತಿಯಾಗಿರುವುದರಿಂದ ಅಚ್ಚುಕಟ್ಟು ಪ್ರದೇಶದ ಸಾವಿರಾರು ರೈತರಿಗೆ ಅನುಕೂಲವಾಗಲಿದೆ. ರಾಜ್ಯದ ಕೆಲವಡೆ ಪ್ರವಾಹದ ಸ್ಥಿತಿ ಎದುರಾಗಿದ್ದರೆ ಕೆಲವೆಡೆ ಭೀಕರ ಬರಗಾಲವಿದೆ. ನೆರೆ ಹಾಗೂ ಬರದ ಸಂತ್ರಸ್ಥರಿಗೆ ರಾಜ್ಯದ ಬಿಜೆಪಿ ಸರ್ಕಾರ ಸೂಕ್ತ ಪರಿಹಾರ ನೀಡಲಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.

ಶಿವಮೊಗ್ಗ ಹಾಗೂ ಮೈಸೂರಿನಲ್ಲಿ ಪ್ರಾಪರ್ಟಿ ಕಾರ್ಡ್ ಅನ್ನು ಪ್ರಯೋಗಿಕವಾಗಿ ಅನುಷ್ಠಾನಗೊಳಿಸಲಾಗಿತ್ತುಆದರೆ ಪ್ರಾಪರ್ಟಿ ಕಾರ್ಡ್ ನಿಂದ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿದ್ದರಿಂದ ಪ್ರಾಪರ್ಟಿ ಕಾರ್ಡ್ ರದ್ದುಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಹೇಳಿದರು.

ಸಂಸದ ರಾಘವೇಂದ್ರ ಅವರಿಗೆ ಸಾಥ್ ನೀಡಿದ ವಿಧಾನಪರಿಷತ್ ಸದಸ್ಯ ಎಸ್.ರುದ್ರೇಗೌಡ ಹಾಗೂ ಶಾಸಕ ಅಶೋಕ್ ನಾಯ್ಕ.

Advertisement

Udayavani is now on Telegram. Click here to join our channel and stay updated with the latest news.

Next