Advertisement

ಯತ್ನಾಳ್ ಅವರಿಗೆ ನನ್ನ ಮೇಲೆ ಪ್ರೀತಿ ಇದೆ : ವಿಜಯೇಂದ್ರ

05:54 PM Mar 15, 2021 | Team Udayavani |

ಚಿಕ್ಕಮಗಳೂರು : ಶಾಸಕ ಯತ್ನಾಳ್ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿ.ವೈ ವಿಜಯೇಂದ್ರ, ನಾನು ಕೂಡ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ, ನಾನು ನರೇಂದ್ರ ಮೋದಿಯ ಬೆಂಬಲಿಗನೂ ಹೌದು, ಹಿಂದೂ ಕಾರ್ಯಕರ್ತನೂ ಹೌದು. ಯತ್ನಾಳ್ ಅವ್ರು ಹಿರಿಯರು. ನನ್ನ ಬಗ್ಗೆ ಅವರಿಗೆ ಪ್ರೀತಿ ಇದೆ ಎಂದಿದ್ದಾರೆ.

Advertisement

ಸಿಡಿ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಎಸ್.ಐ.ಟಿ. ತನಿಖೆ ನಡೆಯುತ್ತಿದೆ ಸತ್ಯಾಸತ್ಯತೆ ಏನೂ ಅನ್ನೋದು ಇನ್ನೂ ಹೊರ ಬರಬೇಕಾಗಿದೆ. ಇದರ ಹಿಂದೆ ಯಾರಿದ್ದಾರೆ, ಯಾರ ಕೈವಾಡವಿದೆ, ಇದರ ಹಿಂದೆ ಅಗ್ರಗಣ್ಯ ನಾಯಕರು ಸೇರಿಕೊಂಡಿದ್ದಾರಾ ಎಂಬುದು ತನಿಖೆಯ ನಂತರ ಗೊತ್ತಾಗುತ್ತೆ. ಅಲ್ಲಿಯವರೆಗೂ ಕಾಯಬೇಕಾಗುತ್ತದೆ‌‌‌ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next