Advertisement

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

12:07 PM Apr 12, 2024 | Team Udayavani |

ಬಳ್ಳಾರಿ: ಬಳ್ಳಾರಿ ಲೋಕಸಭೆ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ನಾಮಪತ್ರ ಸಲ್ಲಿಸಲಿದ್ದಾರೆ. ನಾನು ಅವರ ಜತೆ ಇದ್ದು ನಾಮಪತ್ರ ಸಲ್ಲಿಕೆ ಮಾಡುತ್ತೇವೆ. ಯಡಿಯೂರಪ್ಪ ಅವರು ಆದೇಶ ಮಾಡಿದ್ದಾರೆ. ಹಾಗಾಗಿ ನಾನು ಇಲ್ಲಿಗೆ ಬಂದಿದ್ದೇನೆ ಎಂದು ಬಳ್ಳಾರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ. ವಿಜಯೇಂದ್ರ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ. ಬಿಜೆಪಿ- ಜೆಡಿಎಸ್ ಒಟ್ಟಾಗಿದೆ. ಬಹಳ ಅಂತರದಲ್ಲಿ ರಾಮುಲು ಗೆಲ್ಲುತ್ತಾರೆ ಎಂದರು.

ಈಶ್ವರಪ್ಪ ನಾಮಪತ್ರ ಸಲ್ಲಿಕೆ ವಿಚಾರಕ್ಕೆ ಮಾತನಾಡಿ, ಇನ್ನೂ ನಾಮಪತ್ರ ವಾಪಾಸ್ ಪಡೆಯಲು ಸಮಯ ಇದೆ, ಕಾದು ನೋಡಿ ಎಂದರು.

ಹೆಚ್ಚು ಸ್ಥಾನ ಗೆದ್ದರೆ ವಿಜಯೇಂದ್ರ ಸ್ಥಾನ ಗಟ್ಟಿಯಾಗುತ್ತದೆ ಎನ್ನುವ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ಹೊಸ ಚರ್ಚೆಗಳನ್ನು ಮಾಡಬೇಡಿ, ನಾವು 28 ಸ್ಥಾನಗಳು ಗೆಲ್ಲಬೇಕು ಎನ್ನುವ ಗುರಿ ಇದೆ ಅಷ್ಟೇ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next