Advertisement

ಬ್ಯಾಡಗಿ: ಪುರಸಭೆ ಸಾಮಾನ್ಯ ಸಭೆ ರದ್ದು

02:56 PM Jun 30, 2021 | Team Udayavani |

ಬ್ಯಾಡಗಿ: ಪುರಸಭೆ ಅಧ್ಯಕ್ಷೆ ಕವಿತಾ ಸೊಪ್ಪಿನಮಠ ಅವರ ಅಸಹಕಾರ ಧೋರಣೆ ವಿರೋಧಿ ಸಿ ಬಿಜೆಪಿ,ಕಾಂಗ್ರೆಸ್‌ ಸೇರಿದಂತೆ ಪಕ್ಷೇತರ ಸದಸ್ಯರು ಸಭೆಗೆ ಗೈರು ಹಾಜರಾಗುವ ಮೂಲಕ ಮಂಗಳವಾರ ನಿಗದಿಯಾಗಿದ್ದ ಸಾಮಾನ್ಯ ಸಭೆ ರದ್ದಾಯಿತು.

Advertisement

ಅಧ್ಯಕ್ಷೆ ಕವಿತಾ ಯಾವುದೇ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಸಭೆ ದಿನಾಂಕ ಸೇರಿದಂತೆ ಅಝೆಂಡಾ ಸಿದ್ಧಪಡಿಸಿದ್ದು ಸದಸ್ಯರ ಆಕ್ರೋಶಕ್ಕೆ ಕಾರಣ ಎನ್ನಲಾಗುತ್ತಿದೆ. ಪೂರ್ವ ನಿಗದಿಯಂತೆ ಬೆಳಗ್ಗೆ 11ಕ್ಕೆಅಧ್ಯಕ್ಷೆ ಕವಿತಾ ಸಭೆಗೆ ಆಗಮಿಸಿದರಾದರೂ 11.30 ಆದರೂ ಯಾವುದೇ ಸದಸ್ಯರು ಪಾಲ್ಗೊಳಲಿಲ್ಲ. ಕೆಳಗಿಳಿಸಲು ತೆರೆಮರೆ ಹುನ್ನಾರ: ಪುರಸಭೆಯಲ್ಲಿ ಪ್ರಸಕ್ತ ಬಿಜೆಪಿ 13, ಕಾಂಗ್ರೆಸ್‌ 6 ಹಾಗೂ 4 ಪಕ್ಷೇತರ ಸದಸ್ಯರಿದ್ದಾರೆ. ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ನಿಗದಿಯಾಗಿದ್ದರಿಂದ 7ನೇ ವಾರ್ಡ್‌ನಿಂದ ಪಕ್ಷೇತರರಾಗಿ ಆಯ್ಕೆಯಾಗಿದ್ದ ಕವಿತಾ ಅವರನ್ನು ಬಿಜೆಪಿ ಹೈಕಮಾಂಡ್‌ಅಧ್ಯಕ್ಷೆಯನ್ನಾಗಿ ಮಾಡಿದೆ. ಇತ್ತೀಚೆಗೆ ಅಧ್ಯಕ್ಷೆ ನಡವಳಿಕೆ ಸದಸ್ಯರಿಗೆ ಇರಿಸುಮುರಿಸು ಉಂಟು ಮಾಡಿದ್ದು, ಬಿಜೆಪಿ ಹಿಡಿತದಿಂದ ಆಡಳಿತ ತಪ್ಪುತ್ತಿರುವ ಬೆನ್ನಲ್ಲೇ, ಅಧ್ಯಕ್ಷ ಸ್ಥಾನದಿಂದ ಕೆಳಗಿಸುವ ಕಸರತ್ತು ತೆರೆಮರೆಯಲ್ಲಿ ಆರಂಭವಾಗಿತ್ತು. ಅವರಿಂದ ರಾಜೀನಾಮೆ ಪಡೆಯುವಂತೆ ಬಿಜೆಪಿ ಸದಸ್ಯರು ಹೈಕಮಾಂಡ್‌ಗೆ ಲಿಖಿತ ದೂರು ಸಲ್ಲಿಸಿದ್ದರೂ ಪ್ರಯೋಜನವಾಗಿರಲಿಲ್ಲ, ಇದೀಗ ಸಭೆಗೆ ಗೈರು ಹಾಜರಾಗುವ ಮೂಲಕ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

 ಕಾಂಗ್ರೆಸ್‌-ಪಕ್ಷೇತರ ಸದಸ್ಯರ ಗೈರು: ಬಿಜೆಪಿ ಸದಸ್ಯರಲ್ಲಿನ ಭಿನ್ನಾಭಿಪ್ರಾಯ ಒತ್ತಟ್ಟಿಗಿರಲಿ, ಕಾಂಗ್ರೆಸ್‌ ಪಕ್ಷದ 6 ಮತ್ತು ಪಕ್ಷೇತರ ಮೂವರು ಸದಸ್ಯರೂ ಸಹ ಸಭೆಯಿಂದಹೊರಗುಳಿಯುವ ಮೂಲಕ ತಮ್ಮ ಅಸಮಾಧಾನ  ವ್ಯಕ್ತಪಡಿಸಿದ್ದಾರೆ ಎನ್ನಲಾಗುತ್ತಿದೆ. ಇದರಿಂದ ಕಾಂಗ್ರೆಸ್‌ ಸದಸ್ಯರ ನಡೆ ನಿಗೂಢವಾಗಿದ್ದು, ಅವರೊಂದಿಗೆಪಕ್ಷೇತರರು ಸಹ ಗೈರಾಗಿ ಆಶ್ಚರ್ಯ ಮೂಡಿಸಿದ್ದಾರೆ.ಮುಖ್ಯಾ ಧಿಕಾರಿ ಮನವಿಗೆ ಸ್ಪಂದಿಸದ ಸದಸ್ಯರು:ಇವೆಲ್ಲದರ ಮಧ್ಯೆ ಮುಖ್ಯಾ ಧಿಕಾರಿ ವಿ.ಎಂ. ಪೂಜಾರಸಮನ್ವಯ ಸೃಷ್ಟಿಸಲು ಸದಸ್ಯರ ಮನವೊಲಿಸುವಪಯತ್ನ ನಡೆಸಿದರಾದರೂ ಪ್ರಯೋಜನವಾಗಲಿಲ್ಲ.ಇದರಿಂದ ಕೈಚೆಲ್ಲಿ ಕುಳಿತ ಮುಖ್ಯಾಧಿಕಾರಿಗಳು ಸಭೆರದ್ದುಪಡಿಸುವಂತೆ ಅಧ್ಯಕ್ಷರಿಗೆ ಸಲಹೆ ನೀಡಿದ್ದಾಗಿ ತಿಳಿದು ಬಂದಿದೆ.

ಶಾಸಕರ ವಿಫಲ ಪ್ರಯತ್ನ: ಬೇರೆ ಕಾರ್ಯಕ್ರಮಕ್ಕೆ ತೆರಳಿದ್ದ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಪುರಸಭೆಗೆ ಆಗಮಿಸಿದರು. ಅಧ್ಯಕ್ಷರು ಹಾಗೂ ಸದಸ್ಯರ ಮಧ್ಯೆ ಏರ್ಪಟ್ಟಿರುವಭಿನ್ನಾಭಿಪ್ರಾಯ ಸರಿಪಡಿಸಲು ಯತ್ನಿಸಿದರಾದರೂ ಯಾವುದೇ ಪ್ರಯೋಜನವಾಗಲಿಲ್ಲ

ಸದಸ್ಯರ ನಡುವೆ ಭಿನ್ನ ಭಿನ್ನ ಅಭಿಪ್ರಾಯಗಳಿವೆ. ಆದರೆ, ಭಿನ್ನಾಭಿಪ್ರಾಯವಿಲ್ಲ. ಅಧ್ಯಕ್ಷರು ಮತ್ತುಸದಸ್ಯರ ನಡುವೆ ಸಮನ್ವಯ ಸಾ ಧಿಸುವ ಕುರಿತುಈಗಾಗಲೇ ಎರಡು ಸಭೆಗಳನ್ನು ನಡೆಸಲಾಗಿದೆ.ಶೀಘ್ರದಲ್ಲೇ ಮತ್ತೂಮ್ಮೆ ಸಭೆ ಕರೆದು ಚರ್ಚೆ ನಡೆಸುವೆ.ವಿರೂಪಾಕ್ಷಪ್ಪ ಬಳ್ಳಾರಿ, ಶಾಸಕರು

Advertisement

ಸರ್ವ ಸದಸ್ಯರ ಅಭಿಪ್ರಾಯ ಪಡೆದು ಒಮ್ಮತದ ನಿರ್ಣಯದಂತೆ ಅಧ್ಯಕ್ಷರಿಗೆ ಗೌರವದಿಂದ ರಾಜೀನಾಮೆ ನೀಡುವಂತೆ ಸೂಚಿಸಲಾಗಿತ್ತು. ಆದರೆ ಅವರ ಸರ್ವಾಧಿಕಾರಿ ಧೋರಣೆ ಮುಂದುವರಿದಿದ್ದು,ಪಶಸ್ತಿ ಪಡೆದ ಪುರಸಭೆಗೆ ಅಗೌರವದಿಂದ ನಡೆದುಕೊಂಡಿದ್ದಾರೆ. ಇನ್ನೇನಿದ್ದರೂ ಅವಿಶ್ವಾಸ ನಿರ್ಣಯ ಮಂಡಿಸಲಾಗುವುದು.  ಬಾಲಚಂದ್ರಗೌಡ ಪಾಟೀಲ, -ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರು

Advertisement

Udayavani is now on Telegram. Click here to join our channel and stay updated with the latest news.

Next