Advertisement

ಬ್ಯಾಡರಹಳ್ಳಿಯಲ್ಲಿ ಬಿಜೆಪಿ ಮುಖಂಡ ಅನಂತರಾಜು ಆತ್ಮಹತ್ಯೆ

10:42 PM May 12, 2022 | Team Udayavani |

ಬೆಂಗಳೂರು : ಬಿಜೆಪಿ ಮುಖಂಡರೊಬ್ಬರು ತಮ್ಮ ನಿವಾಸದಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

Advertisement

ಹೇರೋಹಳ್ಳಿ ವಾರ್ಡ್ ನ ನಿವಾಸಿಯಾಗಿರುವ ಬಿಜೆಪಿ ಮುಖಂಡ ಅನಂತರಾಜು ( 46) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಥೈರಾಯ್ಡ್ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದ್ದು ಗುಣಮುಖವಾಗದ ಹಿನ್ನೆಲೆಯಲ್ಲಿ ಮನನೊಂದು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಘಟನೆ ಕುರಿತು ಸಹೋದರ ಮನೋಜ್ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಇದನ್ನೂ ಓದಿ : ಸರಕಾರ, ಖಾಸಗಿ ಸಂಸ್ಥೆಗಳು ಒಗ್ಗೂಡಿ ನವ ಕರ್ನಾಟಕ ನಿರ್ಮಾಣ: ಸಿಎಂ ಬೊಮ್ಮಾಯಿ

Advertisement
Advertisement

Udayavani is now on Telegram. Click here to join our channel and stay updated with the latest news.

Next