Advertisement

ಎಂಎಲ್‌ಸಿ ಸ್ಥಾನಕ್ಕೆ ಬೈರತಿ ಸುರೇಶ್‌ ರಾಜೀನಾಮೆ

06:40 AM Apr 10, 2018 | Team Udayavani |

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಉದ್ದೇಶದಿಂದ ಕಾಂಗ್ರೆಸ್‌ನ ಬೈರತಿ ಸುರೇಶ್‌ ವಿಧಾನ ಪರಿಷತ್‌ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

Advertisement

ಭಾನುವಾರ ರಾತ್ರಿ ಸಭಾಪತಿ ಡಿ.ಎಚ್‌.ಶಂಕರಮೂರ್ತಿ ನಿವಾಸಕ್ಕೆ ತೆರಳಿ ಬೈರತಿ ಸುರೇಶ್‌ ಮೇಲ್ಮನೆ ಸದಸ್ಯ ಸ್ಥಾನಕ್ಕೆ ತಮಮ ರಾಜೀನಾಮೆ ಪತ್ರ ಸಲ್ಲಿಸಿದ್ದು, ಸಭಾಪತಿಗಳು ಈ ರಾಜೀನಾಮೆ ಅಂಗೀಕರಿಸಿದ್ದಾರೆ. ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿರುವ ಬೈರತಿ ಸುರೇಶ್‌ ಅವರ ಸದಸ್ಯತ್ವ ಅವಧಿ ಈ ವರ್ಷದ ಜೂನ್‌ ತಿಂಗಳಲ್ಲಿ ಮುಕ್ತಾಯಗೊಳ್ಳಬೇಕಿತ್ತು. ಆದರೆ, ಅದಕ್ಕೆ ಎರಡು ತಿಂಗಳು ಮುನ್ನವೇ ಅವರು ರಾಜೀನಾಮೆ ನೀಡಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಹೆಬ್ಟಾಳ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿರುವ ಬೈರತಿ ಸುರೇಶ್‌ 2016ರಲ್ಲೇ ಈ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆ ವೇಳೆ ಕಾಂಗ್ರೆಸ್‌ ಟಿಕೆಟ್‌ ಕೇಳಿದ್ದರು. ಆದರೆ, ಕೊನೇ ಕ್ಷಣದಲ್ಲಿ ಟಿಕೆಟ್‌ ಅಬ್ದುಲ್‌ ರೆಹಮಾನ್‌ ಶರೀಫ್ ಪಾಲಾಗಿತ್ತು. ಚುನಾವಣೆಯಲ್ಲಿ ಶರೀಫ್ ಸೋಲನುಭವಿಸಿದ್ದರು. ಈ ಬಾರಿ ಬೈರತಿ ಸುರೇಶ್‌ಗೆ ಹೆಬ್ಟಾಳ ಕ್ಷೇತ್ರದ ಟಿಕೆಟ್‌ ಬಹುತೇಕ ಖಚಿತವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಅವರ ಬೆನ್ನ ಹಿಂದೆ ನಿಂತಿದ್ದಾರೆ. ಹೀಗಾಗಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಉದ್ದೇಶದಿಂದ ಅವರು ವಿಧಾನ ಪರಿಷತ್‌ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next