Advertisement

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

12:28 AM Apr 20, 2024 | Team Udayavani |

ಬೈಂದೂರು: ಪುತ್ತೂರಿನ ವಿವಾಹಿತ ಮಹಿಳೆಯೊಬ್ಬರು ಅನ್ಯಧರ್ಮದ ಯುವಕನೊಂದಿಗೆ ಪರಾರಿಯಾದ ಘಟನೆ ನಡೆದಿದೆ. ಈ ಬಗ್ಗೆ ಪ್ರಶ್ನಿಸಲು ತೆರಳಿದ್ದ ವೇಳೆ ಮಹಿಳೆಯ ಪತಿಗೆ ಹಲ್ಲೆ ನಡೆಸಿದ ಪ್ರಕರಣ ದಾಖಲಾಗಿದೆ. ಇದೊಂದು ಲವ್‌ಜೆಹಾದ್‌ ಪ್ರಕರಣವಾಗಿದೆ ಎಂದು ಮಹಿಳೆಯ ಪತಿ ಆರೋಪಿಸಿದ್ದಾರೆ.

Advertisement

ಪುತ್ತೂರು ಕೆಮ್ಮಾಯಿ ನಿವಾಸಿ ಸುರೇಶ್‌ ಭಟ್‌ ಅವರ ಪತ್ನಿ ಪ್ರತಿಮಾ ಭಟ್‌ ಅವರು ಪುತ್ತೂರಿನ ಕುರಿಯ ಬಳ್ಳಮಜಲು ನಿವಾಸಿ ಪುತ್ತೂರಿನಲ್ಲಿ ಆ್ಯಂಬುಲೆನ್ಸ್‌ ಚಾಲಕನಾಗಿದ್ದ ಸಿರಾಜುದ್ದೀನ್‌ ಜತೆ ಪರಾರಿಯಾಗಿದ್ದಾ ರೆ. ಕೆಲವು ದಿನಗಳ ಹಿಂದೆ ಈ ಘಟನೆ ನಡೆದಿದೆ. ಪುತ್ತೂರಿನ ಸಿಜು ಅಲಿಯಾಸ್‌ ಸಿರಾಜುದ್ದೀನ್‌ ಯಾನೆ ಬೈಂದೂರಿನ ಸೂರಜ್‌ ಪ್ರಕರಣದ ಪ್ರಮುಖ ಆರೋಪಿ.

ಈ ಬಗ್ಗೆ ಮಾಹಿತಿ ಪಡೆದ ಮಹಿಳೆ ಪ್ರತಿಮಾ ಭಟ್‌ ಅವರ ಪತಿ ಸುರೇಶ್‌ ಭಟ್‌ ಪತ್ನಿಯನ್ನು ಪ್ರಶ್ನಿಸಲು ತೆರಳಿದ್ದ ವೇಳೆ ಮೇಲೆ ಅನ್ಯಕೋಮಿನ ಯುವಕ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆಗೈದು ಬೆದರಿಕೆಯೊಡ್ಡಿದ ಘಟನೆ ಬೈಂದೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈ ಬಗ್ಗೆಯೂ ದೂರು ದಾಖಲಾಗಿದೆ. ಸದ್ಯ ಕಾಲೊ¤àಡು ಗ್ರಾಮದ ಕೂರ್ಸೆಯಲ್ಲಿ ಅವರು ನೆಲೆಸಿದ್ದಾರೆ.

 

 

Advertisement
Advertisement

Udayavani is now on Telegram. Click here to join our channel and stay updated with the latest news.

Next