Advertisement

ಪ್ರೀತಿ, ವಿಶ್ವಾಸದಿಂದ ಜೀವನ ನಡೆಸಿ: ಬಿ.ಪಿ. ಪೂಜಾರ್‌

11:34 PM Aug 15, 2019 | Sriram |

ಬೈಂದೂರು: ತಾಲೂಕು ಘೋಷಣೆಯಾದ ಬಳಿಕ ಪ್ರಥಮ ಬಾರಿಗೆ ಸ್ವಾತಂತ್ರ್ಯೋತ್ಸವ ಆಚರಣೆ ಬೈಂದೂರು ಗಾಂಧಿ ಮೈದಾನದಲ್ಲಿ ನಡೆಯಿತು.

Advertisement

ಬೈಂದೂರು ತಹಶೀಲ್ದಾರ್‌ ಬಿ.ಪಿ. ಪೂಜಾರ್‌ ಧ್ವಜಾರೋಹಣಗೈದರು. ಬಳಿಕ ಮಾತನಾಡಿ, ನೆಲದ ಕಾನೂನು ಹಾಗೂ ಸಂವಿಧಾನದ ಮೇಲೆ ಗೌರವಕೊಟ್ಟು ಪರಸ್ಪರ ಪ್ರೀತಿ, ವಿಶ್ವಾಸದಿಂದ ಬದುಕಬೇಕು ಎಂದರು.

ಈ ಸಂದರ್ಭ ಯಡ್ತರೆ ಗ್ರಾ.ಪಂ. ಅಧ್ಯಕ್ಷೆ ಮುಕಾಂಬು ದೇವಾಡಿಗ, ಜಿಲ್ಲಾ ಪಂಚಾಯತ್‌ ಸದಸ್ಯ ಸುರೇಶ ಬಟ್ವಾಡಿ, ತಾ.ಪಂ ಸದಸ್ಯ, ಶಂಕರ ಪೂಜಾರಿ, ಗೌರಿ ದೇವಾಡಿಗ, ಉಡುಪಿ ಜಿ.ಪಂ. ಮಾಜಿ ಅಧ್ಯಕ್ಷ ರಾಜು ಪೂಜಾರಿ, ಗೃಹರಕ್ಷಕ ದಳದ ರಾಘವೇಂದ್ರ, ತಾಲೂಕು ಹೋರಾಟ ಸಮಿತಿ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬೈಂದೂರು ವೃತ್ತ ನಿರೀಕ್ಷಕ ಪರಮೇಶ್ವರ ಗುನಗ, ತಾ.ಪಂ. ಸದಸ್ಯ ಪುಷ್ಪರಾಜ್‌ ಶೆಟ್ಟಿ, ಜಗದೀಶ ದೇವಾಡಿಗ, ಕ್ಷೇತ್ರ ಶಿಕ್ಷಣಾಧಿಕಾರಿ ಜ್ಯೋತಿ, ಬೈಂದೂರು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಪ್ರೇಮಾನಂದ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next