Advertisement

ಬೈಂದೂರು:ಹೆದ್ದಾರಿಯಲ್ಲಿ ಬಸ್‌-ಲಾರಿ ಮುಖಾಮುಖಿ; ಹಲವರಿಗೆ ಗಂಭೀರ ಗಾಯ

10:57 AM Nov 20, 2018 | Team Udayavani |

ಬೈಂದೂರು: ರಾಷ್ಟ್ರೀಯ ಹೆದ್ದಾರಿ 66 ರ ಒತ್ತಿನೆಣೆ ಬಳಿ ಮಂಗಳವಾರ ಬೆಳಗ್ಗೆ ಲಾರಿ ಮತ್ತು ಖಾಸಗಿ ಬಸ್‌ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ್ದು, ಲಾರಿ ಚಾಲಕನ ಸ್ಥಿತಿ ಚಿಂತಾಜನಕವಾಗಿದೆ, ಬಸ್‌ನಲ್ಲಿದ್ದ 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

Advertisement

ಬೆಳಗಾವಿಯಿಂದ ಮಂಗಳೂರಿಗೆ ಸಿಮೆಂಟ್‌ ಸಾಗಿಸುತ್ತಿದ್ದ ಲಾರಿ ಕುಂದಾಪುರದಿಂದ ಭಟ್ಕಳ ಕಡೆಗೆ ತೆರಳುತ್ತಿದ್ದ ಬಸ್‌ಗೆ ಢಿಕ್ಕಿಯಾಗಿ ಅವಘಡ ಸಂಭವಿಸಿದೆ. 

ಲಾರಿಯ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಚಾಲಕನನ್ನು ಹರಸಾಹಸ ಪಟ್ಟು ಹೊರಗೆ ತೆಗೆದು ಆಸ್ಪತ್ರೆಗೆ ದಾಖಲಿಸಲಾಗಿದೆ. 

Advertisement

ಬಸನಲ್ಲಿದ್ದ 6 ಮಂದಿ ಪ್ರಯಾಣಿಕರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

ಬೈಂದೂರು ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಹೆದ್ದಾರಿಯಲ್ಲಿ ರು ಅವ್ಯವಸ್ಥೆಗಳೇ ಅವಘಡಕ್ಕೆ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಸೂಕ್ತ ಮುನ್ಸೂಚನೆ ಇಲ್ಲದೆ ಇರುವುದು, ಅವೈಜ್ಞಾನಿಕವಾಗಿ ರಸ್ತೆ ವಿಭಜಕಗಳಿರುವುದು ಅವಘಡಕ್ಕೆ ಕಾರಣವಾಗುತ್ತಿದೆ. 

Advertisement

Udayavani is now on Telegram. Click here to join our channel and stay updated with the latest news.

Next