Advertisement

ಬೇಡಾ ಅಂದ್ರೂ ಉಪ ಚುನಾವಣೆಗೆ ನಿಂತು ವಿಶ್ವನಾಥ ಸೋತ್ರು: ಭೈರತಿ ಬೇಸರ

11:05 AM Jun 24, 2020 | sudhir |

ಕಲಬುರಗಿ: ಎಚ್.ವಿಶ್ವನಾಥ ಅವರಿಗೆ ಉಪ ಚುನಾವಣೆಗೆ ನಿಲ್ಲಬೇಡಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಮನವಿ ಮಾಡಿದ್ದರು. ಆದರೆ, ಅವರ ಮಾತು ಕೇಳಿದೆ ಚುನಾವಣೆಯಲ್ಲಿ ನಿಂತು ವಿಶ್ವನಾಥ ಸೋತರು ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಬೇಸರ ವ್ಯಕ್ತಪಡಿಸಿದರು.

Advertisement

ಬುಧುವಾರ ನಗರದ ಪ್ರದಕ್ಷಿಣೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪನವರೇ ಖುದ್ದಾಗಿ ಚುನಾವಣೆಗೆ ನೀವು (ವಿಶ್ವನಾಥ) ನಿಲ್ಲುವುದು ಬೇಡ. ನಿಮ್ಮನ್ನು ವಿಧಾನ ಪರಿಷತ್ತಿಗೆ ಆಯ್ಕೆ ಮಾಡಲಾಗುತ್ತದೆ ಎಂದು ಹೇಳಿದ್ದರು. ಆದರೂ, ವಿಶ್ವನಾಥ ಚುನಾವಣೆಗೆ ಸ್ಪರ್ಧಿಸಿದರು ಎಂದು ತಿಳಿಸಿದರು.

ಈಗಲೂ ಕಾಲ ಮಿಂಚಿಲ್ಲ. ವಿಶ್ವನಾಥ ಅವರಿಗೆ ಸ್ಥಾನ-ಮಾನ ಸಿಗುವ ಭರವಸೆ ಇದೆ. ಅವರ ವಿಷಯದಲ್ಲಿ ಪಕ್ಷದ ಹೈಕಮಾಂಡ್ ಉತ್ತಮ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಭೈರತಿ ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿ ವಿಷಯವಾಗಿ ಮುಖ್ಯಮಂತ್ರಿಗಳು ತೀರ್ಮಾನಿಸುತ್ತಾರೆ. ನಾಳೆ (ಗುರುವಾರ) ಸಚಿವ ಸಂಪುಟ ಸಭೆಯಲ್ಲಿ ನಡೆಯಲಿದ್ದು, ಸಭೆಯಲ್ಲಿ ಚರ್ಚಿಸಿ ಲಾಕ್ ಡೌನ್ ಬಗ್ಗೆ ನಿರ್ಧಾರಕ್ಕೆ ಬರುವ ಸಾಧ್ಯತೆ ಇದೆ‌‌ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next