Advertisement

ಇತರೆ ಕಾರ್ಮಿಕರಿಗೂ “ಕಾಯಂ’ಭಾಗ್ಯ?

07:27 PM Sep 20, 2022 | Team Udayavani |

ವಿಧಾನ ಪರಿಷತ್ತು: ಪೌರಕಾರ್ಮಿಕರ ಮಾದರಿಯಲ್ಲೇ ನಗರ ಮತ್ತು ಮಹಾನಗರ ಪಾಲಿಕೆಗಳಲ್ಲಿ ತ್ಯಾಜ್ಯ ವಿಲೇವಾರಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ವಿವಿಧ ಹಂತದ ಕಾರ್ಮಿಕರನ್ನು ಹಂತ-ಹಂತವಾಗಿ ನೇಮಕ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ (ಬೈರತಿ) ತಿಳಿಸಿದರು.

Advertisement

ಮಂಗಳವಾರ ಪ್ರಶ್ನೋತ್ತರ ವೇಳೆ ಬಿಜೆಪಿಯ ಆಯನೂರು ಮಂಜುನಾಥ್‌ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 11,133 ಪೌರಕಾರ್ಮಿಕರನ್ನು ಸರ್ಕಾರಿ ನೌಕರರೆಂದು ನೇಮಕ ಮಾಡಿಕೊಳ್ಳುವ ಸಂಬಂಧ ಸಚಿವ ಸಂಪುಟ ತೀರ್ಮಾನ ಕೈಗೊಂಡಿದೆ. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಸ್ಥಳೀಯ ಸಂಸ್ಥೆಗಳಲ್ಲಿ ತ್ಯಾಜ್ಯ ವಿಲೇವಾರಿಯಲ್ಲಿ ಪ್ರಮುಖ ಪಾತ್ರ ವಹಿಸುವ ಲೋಡರ್‌ಗಳು, ಕ್ಲೀನರ್‌ಗಳು, ಒಳಚರಂಡಿ ಸ್ವತ್ಛಗೊಳಿಸುವ ಸಹಾಯಕರನ್ನು ಹಂತ-ಹಂತವಾಗಿ ಕಾಯಂಗೊಳಿಸಲು ಹಣಕಾಸು ಇಲಾಖೆಯೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು.

ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ 806 ಲೋಡರ್‌, 566 ಕ್ಲಿನರ್‌, 622 ಯುಜಿಡಿ ಹೆಲ್ಪರ್‌ಗಳು ಮತ್ತು ಚಾಲಕರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next