Advertisement

ಬೊಗಳೆ ಬಿಡುವ ಸರ್ಕಾರವಲ್ಲ: ಭೈರತಿ ಬಸವರಾಜ್‌

10:55 AM Mar 08, 2020 | Sriram |

ಬೆಳಗಾವಿ: “ನಮ್ಮದು ದರಿದ್ರ ಸರ್ಕಾರ ಆಗಿದ್ದರೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಬಾದಾಮಿ ಕ್ಷೇತ್ರಕ್ಕೆ 630 ಕೋಟಿ ಅನುದಾನ ನೀಡಲು ಸಾಧ್ಯವಾಗುತ್ತಿರಲಿಲ್ಲ. ನಮ್ಮದು ಬೊಗಳೆ ಬಿಡುವ ಸರ್ಕಾರವಲ್ಲ’ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್‌ ಹೇಳಿದರು.

Advertisement

ಸುದ್ದಿಗಾರರ ಜತೆ ಮಾತನಾಡಿ, ಬಿಎಸ್‌ವೈ ಸರ್ಕಾರ ದರಿದ್ರ ಸರ್ಕಾರ ಎಂದು ಸಿದ್ದರಾಮಯ್ಯ ಸುಮ್ಮನೆ ಟೀಕೆ ಮಾಡುವುದು ಸರಿಯಲ್ಲ. ನಮ್ಮದು ಸುಭದ್ರ ಸರ್ಕಾರ. ಬೊಗಳೆ ಬಿಡುವ ಸರ್ಕಾರ ಅಲ್ಲ. ಸದ್ಯದ ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿ ಸಿಎಂ ಯಡಿಯೂರಪ್ಪ ಬಜೆಟ್‌ ಮಂಡಿಸಿದ್ದಾರೆ. ಎಲ್ಲಾ ಕ್ಷೇತ್ರಗಳಿಗೆ ಸಮಾನವಾಗಿ ಅನುದಾನ ಹಂಚಿಕೆ ಮಾಡಿದ್ದಾರೆ. ಉತ್ತರ ಕರ್ನಾಟಕವನ್ನು ನಿರ್ಲಕ್ಷ್ಯ ಮಾಡಿಲ್ಲ. ಎಲ್ಲವನ್ನೂ ಒಮ್ಮೆಯೇ ಪರಿಹಾರ ಮಾಡಲು ಸಾಧ್ಯವಿಲ್ಲ. ಹಂತ ಹಂತವಾಗಿ ನಮ್ಮ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next