Advertisement

ಹೆಬ್ಬಾಳ ಶಾಸಕ ಭೈರತಿ ಸುರೇಶ್ ಮೇಲೆ ಹಲ್ಲೆಗೆ ಯತ್ನ

12:10 PM Oct 19, 2019 | Sriram |

ಬೆಂಗಳೂರು: ಹೆಬ್ಬಾಳ ಕ್ಷೇತ್ರದ ಶಾಸಕ ಭೈರತಿ ಸುರೇಶ್ ಅವರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಶುಕ್ರವಾರ ನಡೆದಿದೆ.  ಸುರೇಶ್ ಅವರ ಮೇಲೆ ಹಲ್ಲೆಗೆ ಯತ್ನಿಸಿದ ವ್ಯಕ್ತಿಯನ್ನು ಶಿವಕುಮಾರ್ ಎಂದು ಗುರುತಿಸಲಾಗಿದೆ.

Advertisement

ಹಲ್ಲೆಯತ್ನದ ಆರೋಪಿ ಭೈರತಿ ಗ್ರಾಮಕ್ಕೆ ಸೇರಿದವನಾಗಿದ್ದು ಕಾರ್ಪೆಂಟರ್ ವೃತ್ತಿಯಲ್ಲಿದ್ದ ಎಂದು ಪ್ರಾಥಮಿಕ ಮಾಹಿತಿಗಳಿಂದ ತಿಳಿದುಬಂದಿದೆ.

ಇಂದು ಮಧ್ಯಾಹ್ನ ಭೈರತಿ ಸುರೇಶ್ ಅವರು ತಮ್ಮ ಮನೆಯಿಂದ ಹೊರಗೆ ಬರುತ್ತಿದ್ದ ಸಂದರ್ಭದಲ್ಲಿ ಶಿವಕುಮಾರ್ ಬೈಕ್ ಮತ್ತು ಸುರೇಶ್ ಕಾರು ನಡುವೆ ಅಪಘಾತವಾಗಿದೆ. ಈ ಸಂದರ್ಭದಲ್ಲಿ ಕೋಪಗೊಂಡ ಶಿವಕುಮಾರ್ ಕಾರಿನ ಚಾಲಕನನ್ನು ಪ್ರಶ್ನಿಸಿದ್ದಾನೆ. ಈ ವೇಳೆಗೆ ಮಾತಿಗೆ ಮಾತು ಬೆಳೆದು ಶಿವಕುಮಾರ್ ಸುರೇಶ್ ಅವರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ.

ಬಳಿಕ ಶಾಸಕರ ಗನ್ ಮ್ಯಾನ್ ಶಿವಕುಮಾರ್ ನನ್ನು ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next