Advertisement

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಎಷ್ಟೇ ಪ್ರಬಲ ವ್ಯಕ್ತಿಯಾಗಿದ್ದರೂ ಶಿಕ್ಷೆ ಕಟ್ಟಿಟ್ಟ ಬುತ್ತಿ

02:31 PM Jun 19, 2024 | Team Udayavani |

ಚಿಕ್ಕಮಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎಷ್ಟೇ ಪ್ರಬಲ ವ್ಯಕ್ತಿ ಭಾಗಿಯಾಗಿದ್ದರೂ ಅವರಿಗೆ ಶಿಕ್ಷೆ ಕಟ್ಟಿಟ್ಟ ಬುತ್ತಿ ಎಂದು ಸಚಿವ ಭೈರತಿ ಸುರೇಶ್ ಹೇಳಿಕೆ ನೀಡಿದ್ದಾರೆ.

Advertisement

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು ರೇಣುಕಾಸ್ವಾಮಿ ಕುಟುಂಬಕ್ಕೆ ಅನ್ಯಾಯವಾಗಿದೆ ಆದರೆ ಸಿದ್ದರಾಮಯ್ಯ ಸರಕಾರ ಯಾರಿಗೂ ಕಿಂಚಿತ್ತೂ ಅನ್ಯಾಯವಾಗಲು ಬಿಡಲ್ಲ ಸರ್ಕಾರಕ್ಕೆ ಜನರ ಬಗ್ಗೆ ಬಹಳ ಕಮಿಟ್ಮೆಂಟ್ ಇದೆ. ಎಷ್ಟೇ ಪ್ರಬಲ ವ್ಯಕ್ತಿ ಇಂತಹಾ ಕುಕೃತ್ಯದಲ್ಲಿ ಭಾಗಿಯಾಗಿದ್ರು ಶಿಕ್ಷೆ ಕಟ್ಟಿಟ್ಟ ಬುತ್ತಿ ಎಂದು ಹೇಳಿದ್ದಾರೆ.

ಸರ್ಕಾರ ಅವರಿಗೆ ಯಾವ ರೀತಿ ಸಹಾಯ ಮಾಡ್ಬೋದು ಅಂತ ಚರ್ಚೆ ಮಾಡ್ತೀವಿ. ಈಗಾಗಲೇ ಕೆಲವರು ಹಣಕಾಸಿನ ಸಹಾಯ ಮಾಡಿದ್ದಾರೆ, ಗೃಹ ಸಚಿವರು ಕೂಡ ಅವರ ಮನೆಗೆ ಭೇಟಿ ನೀಡಿದ್ದಾರೆ. ರೇಣುಕಾಸ್ವಾಮಿ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಬೇಡಿಕೊಳ್ತೀವಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: Muddebihal: ಮದ್ಯ ಮಾರಾಟ ತಡೆಯಲು ಜನಜಾಗೃತಿ: ಗ್ರಾಮಸ್ಥರಿಂದ ಸಾಮೂಹಿಕ ಪ್ರತಿಭಟನೆ

Advertisement

Udayavani is now on Telegram. Click here to join our channel and stay updated with the latest news.

Next