Advertisement

ಮಾನ ಮರ್ಯಾದೆ ಇದೆಯೇನ್ರಿ…? ಕಾಮಗಾರಿ ವಿಳಂಬಿಸಿದ ಅಧಿಕಾರಿಗಳ ವಿರುದ್ಧ ಬೈರತಿ ಬಸವರಾಜ್ ಗರಂ

02:53 PM Aug 08, 2022 | Team Udayavani |

ಚಿಕ್ಕಮಗಳೂರು : ಕಾಮಗಾರಿ ವಿಳಂಬಿಸಿದ ಅಧಿಕಾರಿಗಳ ವಿರುದ್ಧ ಸಚಿವ ಬೈರತಿ ಬಸವರಾಜ್ ಗರಂ ಆದ ಘಟನೆ ಸೋಮವಾರ ನಡೆದಿದೆ.

Advertisement

ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಾಮಗಾರಿಗಳು ಸರಿಯಾದ ಸಮಯದಲ್ಲಿ ಮುಗಿಯದ ಹಿನ್ನೆಲೆಯಲ್ಲಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂದಿದ್ದಾರೆ.

ಕಳೆದ ನವಂಬರ್ ನಲ್ಲಿ ಮುಗಿಯಬೇಕಿದ್ದ ಅಮೃತ್ ಯೋಜನೆ ಹಾಗೂ ಒಳಚರಂಡಿ ಕಾಮಗಾರಿ ಆಗಸ್ಟ್ ಬಂದರು ಮುಗಿಸದ ಹಿನ್ನೆಲೆ ‘ನಿಮಗೆ ಮಾನ ಮರ್ಯಾದೆ ಇದ್ಯಾ.. ಇಷ್ಟು ದಿನವಾದರೂ ಇನ್ನೂ ಕಾಮಗಾರಿ ಪೂರ್ಣಗೊಂಡಿಲ್ಲ ಅಂದರೆ ಏನು ಅರ್ಥ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವರು ಕಂಟ್ರಾಕ್ಟರ್ ನನ್ನು ಬ್ಲಾಕ್ ಲಿಸ್ಟ್ ಗೆ ಹಾಕಿ ಜೈಲಿಗೆ ಕಳುಹಿಸಿ ಜೊತೆಗೆ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ಹಾಕಿ ಅವರನ್ನು ಜೈಲಿಗೆ ಹಾಕಿ ಕಾಮಗಾರಿಯ ಪೂರ್ಣ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ : ಮಲೆನಾಡಿನಲ್ಲಿ ಮುಂದುವರೆದ ಮಳೆಯ ಅಬ್ಬರ : ಅಲ್ಲಲ್ಲಿ ಧರೆಗುರುಳಿದ ಮರ, ಜನಜೀವನ ಅಸ್ತವ್ಯಸ್ತ

 

Advertisement
Advertisement

Udayavani is now on Telegram. Click here to join our channel and stay updated with the latest news.

Next