Advertisement

ಕುರುಬರಿಗೂ ಎಸ್‌ಟಿ ಮೀಸಲು: ಸಚಿವ ಬೈರತಿ ವಿಶ್ವಾಸ

10:48 PM Oct 29, 2022 | Team Udayavani |

ರಾಯಚೂರು: ಕುರುಬ ಸಮಾಜಕ್ಕೆ ಎಸ್‌ಟಿ ಮೀಸಲಾತಿ ಸಿಗುವ ವಿಶ್ವಾಸವಿದೆ. ಕೆಲವೊಂದು ಕಾನೂನು ತೊಡಕುಗಳಿದ್ದು, ಸರಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಸಚಿವ ಬೈರತಿ ಬಸವರಾಜ ತಿಳಿಸಿದರು.

Advertisement

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸರಕಾರ ಎಸ್ಸಿ-ಎಸ್ಟಿ ಮೀಸಲಾತಿ ಹೆಚ್ಚಿಸಿದೆ. ಅನೇಕ ವರ್ಷಗಳಿಂದ ಬೇಡಿಕೆ ಇದ್ದರೂ ಹಿಂದಿನ ಸರಕಾರ ಯಾಕೆ ಮಾಡಲಿಲ್ಲ? ಎಲ್ಲದಕ್ಕೂ ಕಾಲ ಕೂಡಿ ಬರಬೇಕು.

ಕುರುಬ ಸಮಾಜದ ಕುಲಶಾಸ್ತ್ರ ಅಧ್ಯಯನ ನಡೆದಿದ್ದು, ಉನ್ನತ ಮಟ್ಟದ ಸಮಿತಿ ಮಾಹಿತಿಗಳ ಪರಿಶೀಲನೆಯಲ್ಲಿ ತೊಡಗಿದೆ. ಎಲ್ಲ ಸಮಸ್ಯೆಗಳನ್ನು ನಿವಾರಿಸಿಕೊಂಡ ಮೇಲೆಯೇ ಅಧಿಕೃತವಾಗಿ ಎಸ್‌ಟಿ ಮೀಸಲು ಬಗ್ಗೆ ಹೇಳಬೇಕಾಗುತ್ತದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next