Advertisement

ಡಿ.ಕೆ.ಶಿವಕುಮಾರ್‌ ಜತೆಗೆ ಬಿಜೆಪಿಯ ಬೈರತಿ ಬಸವರಾಜ್‌

11:58 PM Mar 02, 2024 | Team Udayavani |

ಬೆಂಗಳೂರು: ಯಶವಂತಪುರ ಶಾಸಕ ಎಸ್‌.ಟಿ.ಸೋಮಶೇಖರ್‌ ಆಗಾಗ್ಗೆ ಅಲ್ಲಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಜತೆಗೆ ಕಾಣಿಸಿಕೊಳ್ಳುತ್ತಿರುವ ಮಧ್ಯೆ ಈಗ ಶುಕ್ರವಾರ ಕೆ.ಆರ್‌.ಪುರಂ ಬಿಜೆಪಿ ಶಾಸಕ ಬೈರತಿ ಬಸವರಾಜ್‌ ಅವರು ಕೂಡ ಡಿಸಿಎಂ ಜತೆಗೆ ವೇದಿಕೆಗೆ ಬಂದಿದ್ದು ಕುತೂಹಲ ಮೂಡಿಸಿತು.

Advertisement

ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಕೆ.ಆರ್‌.ಪುರಂನ ನಗರೇಶ್ವರ ನಾಗೇನಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಬೈರತಿ ಬಸವರಾಜ್‌ ಅವರು ಡಿಸಿಎಂ ಸಹಿತ ಕಾಂಗ್ರೆಸ್‌ ಮುಖಂಡರ ಜತೆಗೆ ಕಾಣಿಸಿಕೊಂಡರು. ಡಿಕೆಶಿ ಪಕ್ಕದಲ್ಲೇ ಕುಳಿತು ಸ್ವಲ್ಪ ಹೊತ್ತು ಗುಸುಗುಸು ಮಾತನಾಡಿ ಗಮನ ಸೆಳೆದರು.

ಬಳಿಕ ಮಾತನಾಡಿದ ಬೈರತಿ ಬಸವರಾಜ್‌ ಮಾತನಾಡಿ, ಕೊಳಗೇರಿ ನಿವಾಸಿಗಳಿಗಾಗಿ ಮನೆ ನಿರ್ಮಿಸುವ ಕಾರ್ಯಕ್ರಮಕ್ಕೆ ನಾನೇ ಚಾಲನೆ ನೀಡಿದ್ದೆ. ನನ್ನ ಕ್ಷೇತ್ರದಲ್ಲಿ ಕೊಳಗೇರಿ ನಿವಾಸಿಗಳಿಗೆ ಸರಕಾರ ಮನೆ ನಿರ್ಮಿಸಿಕೊಟ್ಟಿರುವುದು ಖುಷಿ ಕೊಟ್ಟಿದೆ. ಅಧಿಕಾರದಲ್ಲಿ ಯಾವುದೇ ಸರಕಾರ ಇದ್ದರೂ ಅಭಿವೃದ್ಧಿ ವಿಚಾರದಲ್ಲಿ ಅಡ್ಡಿ ಮಾಡದೇ ಕೈಜೋಡಿಸಬೇಕು. ಈ ಸರಕಾರ ಬಡವರಿಗೆ ಮನೆ ಕಲ್ಪಿಸುತ್ತಿರುವುದು ಸಂತಸ ವಿಚಾರ ಎಂದರು.

ಕಾರ್ಯಕ್ರಮದ ಬಳಿಕ ಡಿ.ಕೆ.ಶಿವಕುಮಾರ್‌ ವೇದಿಕೆಯಿಂದ ತೆರಳುತ್ತಿದ್ದಂತೆ ಬೈರತಿ ಕೂಡ ಹಿಂದೆ ಸಾಗಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಬೈರತಿ ಬಸವರಾಜ ಕಾಣಿಸಿಕೊಳ್ಳಲಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next