Advertisement

ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹಿಂ ವಿಧಾನಪರಿಷತ್ ಗೆ ಅವಿರೋಧ ಆಯ್ಕೆ

03:58 PM Aug 24, 2017 | Team Udayavani |

ಬೆಂಗಳೂರು: ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಸಿಎಂ ಇಬ್ರಾಹಿಂ ಅವರನ್ನು ವಿಧಾನಪರಿಷತ್ ಗೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ವಿಧಾನಸಭೆ ಕಾರ್ಯದರ್ಶಿ ಎಸ್.ಮೂರ್ತಿ ಗುರುವಾರ ಘೋಷಿಸಿದ್ದಾರೆ.

Advertisement

ಬಿಜೆಪಿಯ ವಿಮಲಾ ಗೌಡ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಕಾಂಗ್ರೆಸ್ ನ ಸಿಎಂ ಇಬ್ರಾಹಿಂ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಆದರೆ ಬೇರೆ ಯಾವ ಅಭ್ಯರ್ಥಿಯೂ ನಾಮCMಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಇಬ್ರಾಹಿಂ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ಆಗಸ್ಟ್‌ 31 ರಂದು ನಡೆಯುವ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಅವರಿಗೆ ಹೈಕಮಾಂಡ್‌ ಟಿಕೆಟ್‌ ನೀಡಿತ್ತು.ಸೋಮವಾರ ಇಬ್ರಾಹಿಂ ನಾಮಪತ್ರ ಸಲ್ಲಿಸಲಿದ್ದರು. ಬಿಜೆಪಿ ಹಾಗೂ ಜೆಡಿಎಸ್‌ ನಲ್ಲಿ ಸಂಖ್ಯಾ ಬಲದ ಕೊರತೆಯಿಂದ ಅಭ್ಯರ್ಥಿಗಳನ್ನು ಹಾಕದಿರಲು ನಿರ್ಧರಿಸಿದ್ದು. ಹೀಗಾಗಿ ಇಬ್ರಾಹಿಂ ಅವಿರೋಧವಾಗಿ ಆಯ್ಕೆಯಾಗುವುದು ಖಚಿತವಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next