Advertisement

ನವೆಂಬರ್‌ ವೇಳೆಗೆ ಜೆಡಿಎಸ್‌ಗೆ ಸಿ.ಎಂ.ಇಬ್ರಾಹಿಂ ?

08:46 PM Sep 23, 2021 | Team Udayavani |

ಬೆಂಗಳೂರು: ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ನವೆಂಬರ್‌ ವೇಳೆಗೆ ಜೆಡಿಎಸ್‌ ಸೇರ್ಪಡೆಯಾಗಬಹುದು ಎಂದು ಹೇಳಲಾಗಿದೆ.

Advertisement

ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನ ಸಿ.ಎಂ.ಇಬ್ರಾಹಿಂ ಅವರಿಗೆ ನೀಡಿ ಪಕ್ಷ ಸಂಘಟನೆಗೆ ಒತ್ತು ನೀಡಲು ಕುಮಾರಸ್ವಾಮಿ ತೀರ್ಮಾನಿಸಿದ್ದಾರೆ. ಈ ಮೂಲಕ ಕಾಂಗ್ರೆಸ್‌ಗೆ ತಿರುಗೇಟು ನೀಡಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚೆಗೆ ಬಿಡದಿ ತೋಟದ ಮನೆಗೆ ಹೋಗಿದ್ದ ಸಿ.ಎಂ.ಇಬ್ರಾಹಿಂ ಜತೆ ಮುಂದಿನ ಕಾರ್ಯತಂತ್ರದ ಬಗ್ಗೆಯೂ ಕುಮಾರಸ್ವಾಮಿ ಚರ್ಚಿಸಿದ್ದಾರೆ ಎನ್ನಲಾಗಿದೆ.

ಈ ಹಿಂದೆಯೂ ಸಿ.ಎಂ.ಇಬ್ರಾಹಿಂ ಕಾಂಗ್ರೆಸ್‌ ತ್ಯಜಿಸಿ ಜೆಡಿಎಸ್‌ ಸೇರಲು ಮುಂದಾದಾಗ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಅವರೊಂದಿಗೆ ಚರ್ಚಿಸಿ ಮನವೊಲಿಸಿದ್ದರು.

ಇದನ್ನೂ ಓದಿ:ಕೋವಿಡ್ ಮೃತರಿಗೆ 1 ಲಕ್ಷ ರೂ. ಯೋಜನೆಗೆ ಚಾಲನೆ: ಸಚಿವ ಆರ್‌. ಅಶೋಕ್‌

Advertisement

ಈ ಮಧ್ಯೆ, ಮುಂದಿನ ವಿಧಾನಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಇದೇ ತಿಂಗಳ 28 ಮತ್ತು 29 ರಂದು ಜೆಡಿಎಸ್‌ವತಿಯಿಂದ ಆಕಾಂಕ್ಷಿಗಳಿಗೆ ಕಾರ್ಯಾಗಾರ ಆಯೋಜಿಸಿದ್ದು, ಅಲ್ಲಿಂದ ಚುನಾವಣೆ ಸಿದ್ಧತೆ ಆರಂಭಿಸಲಿದ್ದಾರೆ. ತಳಮಟ್ಟದಿಂದ ಪಕ್ಷ ಕಟ್ಟುವುದು ಹಾಗೂ ಕಾರ್ಯಕರ್ತರ ಸಮಸ್ಯೆ ಆಲಿಸುವ ಸಂಬಂಧ ಕೆಲವು ತೀರ್ಮಾನ ಕೈಗೊಳ್ಳುವ ನಿರೀಕ್ಷೆಯಿದೆ. ಸ್ಥಳೀಯ ಮಟ್ಟದಲ್ಲಿ ಕಾಂಗ್ರೆಸ್‌ ನಾಯಕರನ್ನು ಸೆಳೆಯುವ ಕುರಿತು ಚರ್ಚೆ ನಡೆಯಲಿದೆ ಎಂದು ಹೇಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next