Advertisement

ಸಿ.ಎಂ. ಗೆ ನೈತಿಕತೆ ಇದ್ದರೆ ರಾಜಿನಾಮೆ ನೀಡಿ ಚುನಾವಣೆಗೆ ಹೋಗಬೇಕು

01:07 PM Nov 04, 2019 | Suhan S |

ಬೆಂಗಳೂರು: ಆಡಿಯೋ ಪ್ರಕರಣವನ್ನು ತನಿಖೆ ನೀಡಿರುವ ನಳಿನಕುಮಾರ್ ಕಟೀಲ್ ಆಡಿಯೋ ತಮ್ಮ ಸಭೆಯಲ್ಲಿಯೇ ನಡೆದಿದೆ ಎನ್ನುವುದನ್ನು ಒಪ್ಪಿಕೊಂಡಿದ್ದಾರೆ. ಈ ಪ್ರಕರಣ ಆದ ನಂತರ ಬಿಜೆಪಿ ಸಚಿವರು ಸಮೂಹ ಶನಿ ಹಿಡಿದಂತೆ ಮಾತನಾಡುತ್ತಿದ್ದಾರೆ. ಅವರು ಆರೋಗ್ಯವಾಗಿರಬೇಕಾದರೆ ಅವರಿಗೆ ನಿಮ್ಯಾನ್ಸ್ ನಲ್ಲಿ ಚಿಕಿತ್ಸೆ ಅಗತ್ಯವಿದೆ ಎಂದು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಹೇಳಿದರು.

Advertisement

ಯಡಿಯೂರಪ್ಪ ಎರಡು ನಾಲಿಗೆ ಇಟ್ಟುಕೊಂಡಿದ್ದಾರೆ. ಅವರೇ ಅನರ್ಹರನ್ನು ರಾಷ್ಟ್ರೀಯ ಅಧ್ಯಕ್ಷರ ಸೂಚನೆ ಮೇರೆಗೆ ಎರಡು ತಿಂಗಳು ಅವರನ್ನು ಮುಂಬೈನಲ್ಲಿ ಇಟ್ಟುಕೊಂಡಿದ್ದಾರೆ ಎಂದು ಹೇಳಿದವರು ಈಗ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುವ ಕನಸು ಕಾಣುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ ಎಂದರು.

ಆಡಿಯೋ ಪ್ರಕರಣವನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಿಂದ ತನಿಖೆಗೆ ಆದೇಶ ಮಾಡಿ.  ನಿಮಗೆ ತಾಕತ್ತಿದ್ದರೆ ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಿ ನೀವು ಬಹುಮತ ಪಡೆದರೆ ನಾನು ನಿಮಗೆ ಸೆಲ್ಯುಟ್ ಹೊಡೆಯುತ್ತೇನೆ.   ನೀವು ಯಡಿಯೂರು ಸಿದ್ದಲಿಂಗನ ಸನ್ನಿಧಾನದಲ್ಲಿ ಪ್ರಮಾಣ ಮಾಡಿ, ನೀವು ಅಮಿತ್ ಶಾ ನಿರ್ದೇಶನದಂತೆ ಅನರ್ಹ ಶಾಸಕರನ್ನು ಮುಂಬೈನಲ್ಲಿ.ಇಟ್ಟುಕೊಂಡಿದ್ದೇವು ಎಂದು ಹೇಳಿಲ್ಲ ಎಂದು ಪ್ರಮಾಣ ಮಾಡಿ,  ನಾವು ನೀವೇ ಹೇಳಿದ್ದು ಎಂದು ಪ್ರಮಾಣ ಮಾಡಲು ಸಿದ್ದರಿದ್ದೇವೆ ಎಂದು ಸವಾಲು ಹಾಕಿದ್ದರು.

ನಿಮ್ಮನ್ನು ಸಿಎಂ ಸ್ಥಾನದಿಂದ.ಕೆಳಗೆ ಇಳಿಸಲು ಬಿಜೆಪಿಯಲ್ಲಿ ಗುಂಪುಗಳು ಪ್ರಯತ್ನ ನಡೆಸುತ್ತಿದ್ದಾರೆ. 2011ರ ರಲ್ಲಿ ನಿಮ್ಮನ್ನು ಕೆಳಗಿಳಿಸಿದವರು ಈಗ ಮತ್ತೆ ನಿಮ್ಮನ್ನು ಕೆಳಗಿಳಿಸಲು ಪ್ರಯತ್ನ ಮಾಡುತ್ತಿದ್ದಾರೆ.,

ಅಶೋಕ್ ಅವರು ಮೊಯ್ಲಿ ಕಾಲದಿಂದಲೂ ಆಡಿಯೋ ಬರುತ್ತಿದೆ ಎಂದು ಹೇಳುತ್ತಿದ್ದಾರೆ. ಅಶೋಕ್ ಬಾಯಿಗೆ ಬಂದಂತೆ ಮಾತನಾಡಬೇಡಿ. ತಾಕತ್ತಿದ್ದರೆ ಅವರಿಂದಾನೆ ಅಧಿಕಾರಕ್ಕೆ ಬಂದಿದ್ದೇವೆ ಎಂದು ಹೇಳಬೇಕು. ಈಗ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮೇಲೆ ಭಯ ಶುರುವಾಗಿದೆ . ಅಮಿತ್ ಶಾ ಒಂದು ಸರ್ಕಾರ ಪತನಗೊಳಿಸಲು ಪ್ರಯತ್ನ ನಡೆಸಿದ್ದಾರೆ. ಅವರು ಸಚಿವರಾಗಿ ಮುಂದುವರೆಯಲು ನೈತಿಕತೆಯಿಲ್ಲ. ಯಡಿಯೂರಪ್ಪ ಅವರಿಗೆ ಸಂವಿಧಾನ ಅರ್ಥವಾಗುವುದಿಲ್ಲ. ಅವರು ನೈತಿಕತೆ ಇದ್ದರೆ ರಾಜಿನಾಮೆ ನೀಡಿ ಚುನಾವಣೆಗೆ ಹೋಗಬೇಕು ಎಂದು ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next