Advertisement

“ಕಾಂಗ್ರೆಸ್‌ಗೆ ಪ್ರಜಾಧ್ವನಿ ಬಸ್‌ನಲ್ಲಿರುವಷ್ಟೇ ಸ್ಥಾನ’: ಅಶ್ವತ್ಥ ನಾರಾಯಣ

11:21 PM Feb 11, 2023 | Shreeram Nayak |

ತೀರ್ಥಹಳ್ಳಿ: ಕಾಂಗ್ರೆಸ್‌ನ ಪ್ರಜಾಧ್ವನಿ ಯಾತ್ರೆಯ ಬಸ್‌ನಲ್ಲಿ ಎಷ್ಟು ಜನ ಪ್ರಯಾಣಿಸುತ್ತಾರೋ ಅಷ್ಟೇ ಸೀಟು ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸಿಗಲಿದೆ ಎಂದು ಸಚಿವ ಡಾ| ಅಶ್ವತ್ಥ ನಾರಾಯಣ ಲೇವಡಿ ಮಾಡಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾ ಡಿದ ಅವರು, ರಾಜ್ಯದಲ್ಲಿ ಈ ಬಾರಿ ಬಿಜೆಪಿ ಗೆದ್ದು ಅಧಿಕಾರಕ್ಕೆ ಬರಲಿದೆ. ಇಡೀ ದೇಶದಲ್ಲೇ ಕಾಂಗ್ರೆಸ್‌ ಮುಕ್ತವಾಗಿದೆ. ಎಲ್ಲ ರಾಜ್ಯಗಳೂ ಕಾಂಗ್ರೆಸ್‌ ಮುಕ್ತವಾಗುತ್ತಿದೆ. ನಮ್ಮ ರಾಜ್ಯವೂ ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಮುಕ್ತವಾಗಲಿದೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ ಎಂದು ಡಿ.ಕೆ. ಶಿವಕುಮಾರ್‌ ಸಹಿತ ಹಲವರು ಕನಸು ಕಾಣುತ್ತಿದ್ದಾರೆ. ಆದರೆ ಬಿಜೆಪಿ ಮತ್ತೂಮ್ಮೆ ಗೆಲ್ಲಲಿದೆ. ಯಾವ ಕಾರಣಕ್ಕೂ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಈಗ ಇರುವ ಶಾಸಕರ ಸಂಖ್ಯೆ ಶೇ. 50ರಷ್ಟು ಕಡಿಮೆಯಾಗಲಿದೆ ಎಂದರು.

ಲ್ಯಾಪ್‌ಟಾಪ್‌ಗೆ ಆದ್ಯತೆ
ಸರಕಾರಿ ಕಾಲೇಜಿನಲ್ಲಿ ಲ್ಯಾಪ್‌ಟಾಪ್‌ ಕೊಡಲು ಆದ್ಯತೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಖಾಸಗಿ ಕಾಲೇಜುಗಳಲ್ಲಿ ವಿತರಿಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next