Advertisement

ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು: ಸಚಿವ ಅಶ್ವತ್ಥನಾರಾಯಣ ವಿವಾದದ ಹೇಳಿಕೆ

12:16 AM Feb 16, 2023 | Team Udayavani |

ಮಂಡ್ಯ: ಉರಿಗೌಡ ಹಾಗೂ ನಂಜೇಗೌಡರು ಟಿಪ್ಪು ಸುಲ್ತಾನ್‌ನನ್ನು ಹೇಗೆ ಹೊಡೆದು ಹಾಕಿದರೋ ಅದೇ ರೀತಿ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು ಎಂದು ಸಚಿವ ಡಾ| ಸಿ.ಎನ್‌.ಅಶ್ವತ್ಥನಾರಾಯಣ ವಿವಾದದ ಮಾತುಗಳನ್ನಾಡಿರುವ ವೀಡಿಯೋ ವೈರಲ್‌ ಆಗಿದೆ.

Advertisement

ತಾಲೂಕಿನ ಸಾತನೂರು ಕಂಬದ ನರಸಿಂಹಸ್ವಾಮಿ ಬೆಟ್ಟದಲ್ಲಿ ನಡೆದ ಕಸಬಾ ಮಹಾಶಕ್ತಿ ಕೇಂದ್ರ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಅವರು, ಟಿಪ್ಪು ಎಂದರೆ ಸಿದ್ದರಾಮಯ್ಯ ಬಂದು ಬಿಡ್ತಾರೆ. ಅವರನ್ನು ಎಲ್ಲಿಗೆ ಕಳುಹಿಸಬೇಕು ಎಂದು ಕಾರ್ಯಕರ್ತರನ್ನು ಕೇಳುತ್ತಾರೆ. ಆಗ ಅವರನ್ನು ಗೋರಿಗೆ ಕಳುಹಿಸಬೇಕು ಎಂದು ಕಾರ್ಯಕರ್ತರು ಉತ್ತರ ನೀಡುತ್ತಾರೆ.

ಮುಂದುವರಿದು ಮಾತನಾಡಿದ ಅವರು, ಉರಿಗೌಡ ಹಾಗೂ ನಂಜೇಗೌಡ ಏನು ಮಾಡಿದರು, ಟಿಪ್ಪುನನ್ನು ಹೊಡೆದು ಹಾಕಿದರು. ಅದೇ ರೀತಿ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು ಎಂದು ವ್ಯಂಗ್ಯವಾಡುತ್ತಾರೆ.

ಈ ವೀಡಿಯೋ ಎಲ್ಲ ಕಡೆ ವೈರಲ್‌ ಆಗಿದೆ. ಟಿಪ್ಪು ಅಂದ್ರೆ ಸಿದ್ದರಾಮಯ್ಯರವರು ಬಂದು ಬಿಡ್ತಾರೆ. ಟಿಪ್ಪು ಬೇಕಾ ಸಾವರ್ಕರ್‌ ಬೇಕಾ? ಅವರದ್ದು ಬಕೆಟ್‌ ಪಕ್ಷಗಳು. ನಮ್ಮದು ಜನಪರ ಪಕ್ಷ ಎಂದು ವೀಡಿಯೋದಲ್ಲಿ ಹೇಳುತ್ತಾರೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next