Advertisement

ತೆಲುಗಿನ ಖ್ಯಾತ ಸಾಹಿತಿ ಸಿ. ನಾರಾಯಣ ರೆಡ್ಡಿ ಇನ್ನಿಲ್ಲ

12:39 AM Jun 13, 2017 | Team Udayavani |

ಹೈದರಾಬಾದ್‌: ತೆಲುಗಿನ ಖ್ಯಾತ ಕವಿ, ಬರಹಗಾರ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಸಿ. ನಾರಾಯಣ ರೆಡ್ಡಿ (85) ಸೋಮವಾರ ಬೆಳಗ್ಗೆ ಕೊನೆಯುಸಿರೆಳೆದರು. ರವಿವಾರ ಅನಾರೋಗ್ಯದಿಂದ ಬಳಲಿದ ಅವರನ್ನು ಮಾನಿಕೊಂಡದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹಲವಾರು ಸಾಹಿತ್ಯ ಪ್ರಕಾರಗಳಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಅವರು 80ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. 3,500 ಚಿತ್ರಗೀತೆಗಳನ್ನೂ ರಚಿಸಿದ್ದಾರೆ. ರೆಡ್ಡಿ ನಿಧನಕ್ಕೆ ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next