Advertisement

Finance: ರಾಜ್ಯ ಹಣಕಾಸು ಆಯೋಗಕ್ಕೆ ಸಿ.ನಾರಾಯಣಸ್ವಾಮಿ ನೇಮಕ

11:29 PM Oct 11, 2023 | Team Udayavani |

ಬೆಂಗಳೂರು: ಮಾಜಿ ಸಂಸದ ಸಿ. ನಾರಾಯಣಸ್ವಾಮಿ ಅವರನ್ನು 5ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

Advertisement

ಇದೇ ವೇಳೆ ನಿವೃತ್ತ ಐಎಎಸ್‌ ಅಧಿಕಾರಿ ಮೊಹಮ್ಮದ್‌ ಸನಾವುಲ್ಲಾ ಹಾಗೂ ನಿವೃತ್ತ ಲೆಕ್ಕ ನಿಯಂತ್ರಕ ಆರ್‌.ಎಸ್‌. ಫೊಂಡೆ ಅವರನ್ನು ಆಯೋಗದ ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬುಧವಾರ ಸಿ. ನಾರಾಯಣಸ್ವಾಮಿ ಅವರಿಗೆ ನೇಮಕಾತಿ ಆದೇಶವನ್ನು ನೀಡಿದರು. ಅಧ್ಯಕ್ಷರು ಹಾಗೂ ಸದಸ್ಯರು ಆಯೋಗದ ಪೂರ್ಣಾವಧಿ ಸದಸ್ಯರಾಗಿರುತ್ತಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಆಯೋಗವು ಜಿ.ಪಂ., ತಾ.ಪಂ., ಗ್ರಾ.ಪಂ., ಪಾಲಿಕೆಗಳು, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್‌ಗಳ ಆರ್ಥಿಕ ಸ್ಥಿತಿಗತಿಗಳನ್ನು ಪರಿಶೀಲಿಸಿ ಅಗತ್ಯ ಶಿಫಾರಸುಗಳನ್ನು ಮಾಡಲಿದೆ ಎಂದು ಆದೇಶದಲ್ಲಿ ಹೇಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next