Advertisement

ಅಯೋಧ್ಯೆ ಮಾದರಿಯಲ್ಲಿ ದತ್ತಪೀಠ ವಿವಾದ ಇತ್ಯರ್ಥ: ಸಿ ಟಿ ರವಿ

10:03 AM Dec 12, 2019 | keerthan |

ಚಿಕ್ಕಮಗಳೂರು: ಈ ಬಾರಿ ದತ್ತಪೀಠ ವಿವಾದ ಇತ್ಯರ್ಥ ಮಾಡುವ ಸಂಕಲ್ಪ ಮಾಡಿದ್ದೇನೆ. ಅಯೋಧ್ಯೆ ಮಾದರಿಯಲ್ಲಿ ದತ್ತಪೀಠ ವಿವಾದ ಇತ್ಯರ್ಥವಾಗುವ ವಿಶ್ವಾಸವಿದೆ ಎಂದು ಸಚಿವ ಸಿ.ಟಿ ರವಿ ಹೇಳಿದರು.

Advertisement

ಇಲ್ಲಿ ದತ್ತ ಮಾಲಾಧಾರಿಯಾಗಿ ಮಾತನಾಡಿದ ಸಚಿವರು, ವಿವಾದ ಇತ್ಯರ್ಥ ಮಾಡುವ ವಿಶ್ವಾಸ ನನಗಿದೆ. ಇದೊಂದು ನ್ಯಾಯ ತತ್ವ ಬದ್ಧ ಹೋರಾಟವಾಗಿದೆ. ದತ್ತಪೀಠ ವಿವಾದ ಇತ್ಯರ್ಥಕ್ಕೆ ಜೆಡಿಎಸ್-ಕಾಂಗ್ರೆಸ್ ಸಹಮತವಿರಲಿ. ಹಿಂದೂ ಅರ್ಚಕರ ನೇಮಕಕ್ಕೆ ಜೆಡಿಎಸ್ ಸಹಮತ ವ್ಯಕ್ತಪಡಿಸಿದೆ ಎಂದು ಸಿ ಟಿ ರವಿ ವಿಶ್ವಾಸ ವ್ಯಕ್ತಪಡಿಸಿದರು.

ದತ್ತಪೀಠದಲ್ಲಿ ಹಿಂದೂ ಪದ್ಧತಿಗಳ ಪ್ರಕಾರ ಪೂಜೆ ಆಗಬೇಕು.  ದತ್ತಪೀಠ ವಿವಾದ ರಾಜಕೀಯ ಕೇಂದ್ರೀಕೃತವಲ್ಲ. ದಲಿತ ಅರ್ಚಕರನ್ನು ನೇಮಕ ಮಾಡಿದರು ಪರವಾಗಿಲ್ಲ. ಒಟ್ಟಿನಲ್ಲಿ ಹಿಂದೂ ಅರ್ಚಕರನ್ನು ನೇಮಕ ಮಾಡಲಿ ಎಂದು ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next