Advertisement

ಗೋವಾ : ಸಿಎಂ ಹಾಗೂ ಎಚ್ ಎಮ್ ನಡುವೆ ಯಾವ ಭಿನ್ನಾಭಿಪ್ರಾಯಗಳಿಲ್ಲ : ರವಿ

05:35 PM Jun 10, 2021 | Team Udayavani |

ಪಣಜಿ : ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಮತ್ತು ಆರೋಗ್ಯ ಸಚಿವ ವಿಶ್ವಜಿತ್ ರಾಣೆ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಮತ್ತು ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ಗೋವಾ ಉಸ್ತುವಾರಿ ಸಿ.ಟಿ.ರವಿ ತಿಳಿಸಿದ್ದಾರೆ.

Advertisement

ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ರವಿ,  ಗೋವಾದಲ್ಲಿ ಸಿಎಂ ಮತ್ತು ಎವ್ ಎಮ್(ಹೆಲ್ತ್ ಮಿನಿಸ್ಟರ್)  ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಒಬ್ಬರಿಗೊಬ್ಬರು ಯಾವುದೇ ವೈಮನಸ್ಸಿಲ್ಲದೆ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಮಾಧ್ಯಮಗಳಲ್ಲಿ ತಪ್ಪಾಗಿ ಸುದ್ದಿಯಾಗುತ್ತಿವೆ. ನಮ್ಮ ನಡುವೆ ಯಾವುದೇ ಭಿನ್ನಾಬಿಪ್ರಾಯಗಳಿಲ್ಲ. ನಾವೆಲ್ಲಾ ಒಟ್ಟ್ಆಗಿ ಕೋವಿಡ್ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ. ನಾವು ಕೇವಲ ಚುನಾವಣೆಗಾಗಿ ಕೆಲಸ ಮಾಡುವವರಲ್ಲ, ನಾವು ಜನರಿಗಾಗಿ ಕೆಲಸ ಮಾಡುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ : ವೀಸಾ ಇಲ್ಲದೆ ಭಟ್ಕಳದಲ್ಲಿ ನೆಲಸಿದ್ದ ಪಾಕಿಸ್ತಾನಿ ಮಹಿಳೆ ಬಂಧನ: ಅಕ್ರಮ ದಾಖಲೆಗಳು ವಶಕ್ಕೆ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶಾಸಕರಿಗೆ ಯಾವುದೇ ಸೂಚನೆಗಳನ್ನು ನೀಡಲಾಗಿದೆಯೇ ಎಂದು ಸುದ್ಧಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅದನ್ನು ಬಹಿರಂಗ ಪಡಿಸಲು ಸಾಧ್ಯವಿಲ್ಲ. ಅದು ಪಕ್ಷದ ಆತಂರಿಕ ವಿಚಾರ, ಪಕ್ಷ ಸೂಚನೆ ನಿಡುತ್ತದೆ ಎಂದು ಹೇಳಿದ್ದಾರೆ.

ಇನ್ನು,  ಕೋವಿಡ್-19 ಪರಿಸ್ಥಿತಿಯನ್ನು ದೇಶದಲ್ಲಿ ಉತ್ತಮವಾಗಿ ನಿಭಾಯಿಸಲಾಗಿದೆ. ಕೇವಲ ಒಂದು ವರ್ಷದ ಅವಧಿಯಲ್ಲಿ ಭಾರತವು ಎರಡು ಲಸಿಕೆಗಳನ್ನು ಅಭಿವೃದ್ಧಿಪಡಿಸಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

Advertisement

2022 ರ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆಯ ಹಿನ್ನೆಲೆಯಲ್ಲಿ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಚ್ ಮತ್ತು ಗೋವಾ ಬಿಜೆಪಿ ಉಸ್ತುವಾರಿ ಸಿ.ಟಿ ರವಿ ಗೋವಾಕ್ಕೆ ಆಗಮಿಸಿದ್ದು ಪಕ್ಷದ ಸಚಿವರು, ಶಾಸಕರು, ಪದಾಧಿಕಾರಿಗಳು ಮತ್ತು ಕೋರ್ ಕಮೀಟಿಯೊಂದಿಗೆ ಸಭೆ ನಡೆಸಿದ್ದಾರೆ.

ಇದನ್ನೂ ಓದಿ : ಬಜಾಜ್ ಫೈನಾನ್ಸ್, ಎಸ್ ಬಿಐ ಷೇರುಗಳಿಗೆ ಲಾಭ: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 359 ಅಂಕ ಏರಿಕೆ

Advertisement

Udayavani is now on Telegram. Click here to join our channel and stay updated with the latest news.

Next