Advertisement

ಚುನಾವಣಾ ಬಳಿಕ ಸಿಲಿಂಡರ್ ಗ್ಯಾಸ್ ಬೆಲೆ ಏರಿಕೆ ಟೀಕೆ; ತಿರುಗೇಟು ನೀಡಿದ ಸಿ.ಟಿ. ರವಿ

02:33 PM Mar 22, 2022 | Team Udayavani |

ಬೆಂಗಳೂರು: ಪಂಚರಾಜ್ಯ ಚುನಾವಣೆ ಬಳಿಕ ಇಂಧನ ಬೆಲೆ‌ ಏರಿಕೆಯಾಗಿದೆ ಎಂದು ವಾದಿಸುವವರನ್ನು ಬಾವಿ ಒಳಗಿನ ಕಪ್ಪೆ ಎಂದು ಕರೆಯಬೇಕೋ ಅಥವಾ ಪೊಟರೆ ಒಳಗಿನ ಕಪ್ಪೆ ಎನ್ನಬೇಕೋ ಗೊತ್ತಾಗುತ್ತಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು ಜಗತ್ತಿನಾದ್ಯಂತ ಏರಿಕೆಯಾಗುತ್ತಿದೆ. ಬರೀ ಈ ನಾಲ್ಕು ರಾಜ್ಯದ ಚುನಾವಣೆಯಿಂದ ದರ ಏರಿಕೆಯಾಗುತ್ತಿದೆ ಎನ್ನುವುದು ತಪ್ಪು ವ್ಯಾಖ್ಯಾನ. ಅವರನ್ನು ಶತ ಮೂರ್ಖರು ಎಂದು ಕರೆಯಬೇಕಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಮಾಧ್ಯಮದವರು ಯಾರು ಯಾರನ್ನು ಬದಲಾಯಿಸುತ್ತೀರಾ? ನಿಮ್ಮ ಹೇಳಿಕೆಗೆ ಉತ್ತರ ಕೊಡಲು ಆಗುತ್ತಾ? ಎಂದು ಉತ್ತರಿಸಿದರು.

ಇದನ್ನೂ ಓದಿ:ಏಪ್ರಿಲ್ ನಲ್ಲಿ ಸಂಪುಟ ಸರ್ಜರಿ; ದಲಿತ ಸಮುದಾಯದ ನಾಯಕರಿಗೆ ರಾಜ್ಯಾಧ್ಯಕ್ಷ ಪಟ್ಟ?

ಸಿ.ಟಿ.ರವಿ ಆಕಾಂಕ್ಷಿ ಎಂಬುದಕ್ಕೆ ನಗುತ್ತಾಲೇ ಉತ್ತರಿಸಿದ ಅವರು ನಮ್ಮಲ್ಲಿ ಆಸೆ, ಆಕಾಂಕ್ಷೆ ಏನು ನಡೆಯಲ್ಲ. ನಾನು ಕಾರ್ಯಕರ್ತ, ಕಾರ್ಯಕರ್ತನಾಗಿ ಕೆಲಸ ಮಾಡಬೇಕು. ಜವಾಬ್ದಾರಿ ಬದಲಾಗುತ್ತದೆ, ಕಾರ್ಯಕರ್ತನೆಂಬ ಭಾವನೆ ಬದಲಾಗದು. ಚೆನ್ನಾಗಿರುವ ಸಂಸಾರಕ್ಕೆ ಹುಳಿ ಹಿಂಡಬೇಡಿ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next