Advertisement

ಸಚಿವ ಸ್ಥಾನಕ್ಕೆ ಸಿ.ಟಿ. ರವಿ ರಾಜೀನಾಮೆ

12:07 AM Oct 04, 2020 | mahesh |

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ಬೆನ್ನಲ್ಲೇ ಸಿ.ಟಿ. ರವಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ ಈ ರಾಜೀನಾಮೆಯನ್ನು ಸಿಎಂ ಯಡಿಯೂರಪ್ಪ ಅಂಗೀಕರಿಸುತ್ತಾರೆಯೇ ಇಲ್ಲವೇ ಎಂಬ ಕುತೂಹಲ ಮೂಡಿದೆ.

Advertisement

ಸಿಎಂ ಅಧಿಕೃತ ನಿವಾಸ “ಕಾವೇರಿ’ಯಲ್ಲಿ ಶನಿವಾರ ಯಡಿಯೂರಪ್ಪ ಅವರನ್ನು ಭೇಟಿಯಾದ ಸಿ.ಟಿ. ರವಿ ಅವರು, “ಒಬ್ಬ ವ್ಯಕ್ತಿ ಒಂದು ಹುದ್ದೆ’ ಎಂಬ ಪಕ್ಷದ ಅಲಿಖೀತ ನಿಯಮದಂತೆ ರಾಜೀನಾಮೆ ಸಲ್ಲಿಸಿದರು. ಆದರೆ ಸಿಎಂ ರಾಜೀನಾಮೆಯನ್ನು ಅಂಗೀಕರಿಸಿದಂತಿಲ್ಲ.

ಅ. 5 ಮತ್ತು 6ರಂದು ದಿಲ್ಲಿಯಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ಹೊಸ ಪದಾಧಿಕಾರಿಗಳ ಪ್ರತ್ಯೇಕ ಸಭೆ ಸಹಿತ ಸಂಘಟನ ಸಭೆಗಳು ನಡೆಯಲಿವೆ. ಈ ವೇಳೆ ವರಿಷ್ಠರು ರಾಜೀನಾಮೆ ಬಗ್ಗೆ ಸೂಚನೆ ನೀಡುವ ಸಾಧ್ಯತೆ ಇದೆ.

Advertisement

Udayavani is now on Telegram. Click here to join our channel and stay updated with the latest news.

Next