Advertisement

ಬಂಗಾಳಕ್ಕೆ ಆನಂದ ಬೋಸ್‌ ಗವರ್ನರ್‌

10:46 PM Nov 17, 2022 | Team Udayavani |

ನವದೆಹಲಿ: ಪಶ್ಚಿಮ ಬಂಗಾಳದ ನೂತನ ರಾಜ್ಯಪಾಲರನ್ನಾಗಿ ಡಾ.ಸಿ.ವಿ.ಆನಂದ ಬೋಸ್‌ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಗುರುವಾರ ಆದೇಶ ಹೊರಡಿಸಿದ್ದಾರೆ.

Advertisement

ಆ ರಾಜ್ಯದ ರಾಜ್ಯಪಾಲರಾಗಿದ್ದ ಜಗದೀಪ್‌ ಧನ್ಕರ್‌ ಅವರು ಉಪರಾಷ್ಟ್ರಪತಿಯಾಗಿದ್ದರಿಂದ ಹುದ್ದೆ ತೆರವಾಗಿಯೇ ಉಳಿದಿತ್ತು. ನಿವೃತ್ತ ಐಎಎಸ್‌ ಅಧಿಕಾರಿಯಾಗಿರುವ ಬೋಸ್‌ ಅವರು ಇಂಗ್ಲಿಷ್‌, ಹಿಂದಿ, ಮಲಯಾಳಂಗಳಲ್ಲಿ 40ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. ಅವರು ಲಾಲ್‌ಬಹದ್ದೂರ್‌ ಶಾಸ್ತ್ರಿ ನ್ಯಾಷನಲ್‌ ಅಕಾಡೆಮಿ ಆಫ್ ಅಡ್ಮಿನಿಸ್ಟ್ರೇಷನ್‌ನ ಜವಹಾರ್‌ಲಾಲ್‌ ನೆಹರೂ ಫೆಲೋಶಿಪ್‌ ಪಡೆದ ಮೊದಲ ವ್ಯಕ್ತಿಯಾಗಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next