Advertisement

ಸಿ-ವಿಜಿಲ್‌ ಆ್ಯಪ್‌ ಬಳಕೆಗೆ ಕರೆ

04:23 PM Apr 14, 2019 | keerthan |

ತುಮಕೂರು: ಚುನಾವಣಾ ಅಕ್ರಮ ತಡೆಗಟ್ಟಲು ಕೇಂದ್ರ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಸಿ-ವಿಜಿಲ್‌ ಆ್ಯಪ್‌ ಬಳಕೆ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ತುಮಕೂರು ನಗರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಸಹಾಯ ಕೇಂದ್ರಕ್ಕೆ ಸ್ವೀಪ್‌ ಸಮಿತಿ ಅಧ್ಯಕ್ಷೆ ಹಾಗೂ ಜಿಪಂ ಸಿಇಒ ಶುಭಾ ಕಲ್ಯಾಣ್‌ ಚಾಲನೆನೀಡಿದರು.

Advertisement

ಈ ವೇಳೆ ಮಾತನಾಡಿದ ಅವರು, ಚುನಾವಣಾ ಅಕ್ರಮಗಳು, ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಂತಹ ಪ್ರಕರಣಗಳು ನಡೆದಾಗ ಅವುಗಳನ್ನು ಚಿತ್ರೀಕರಿಸಿ ಪೋಟೋ, ವಿಡಿಯೋ ಈ ಆ್ಯಪ್‌ ಮೂಲಕ ಆಯೋಗಕ್ಕೆ ಸಲ್ಲಿಸಬಹುದು ಎಂದು ತಿಳಿಸಿದರು.

ಮೊಬೈಲ್‌ನ ಪ್ಲೇಸ್ಟೋರ್‌ ಮೂಲಕ ಈ ಆ್ಯಪನ್ನು ಡೌನ್‌ಲೋಡ್‌ ಮಾಡಕೊಂಡು ಬಳಕೆ ಮಾಡುವ ಬಗ್ಗೆ ಈ ಸಹಾಯ ಕೇಂದ್ರದಲ್ಲಿರುವ ಸಿಬ್ಬಂದಿ ಸಾರ್ವಜನಿಕರಿಗೆ ಸಹಾಯ ಮಾಡಲಿದ್ದಾರೆ. ಈ ಸಹಾಯ ಕೇಂದ್ರ ಏ.16ರವರೆಗೂ ಕಾರ್ಯನಿರ್ವಹಿಸಲಿದೆ ಎಂದರು. ಹೆಚ್ಚಿನ ಸಂಖ್ಯೆಯಲ್ಲಿ ಮತ ದಾರರು ಈ ಆ್ಯಪನ್ನು ಡೌನ್‌ಲೋಡ್‌ ಮಾಡಿಕೊಂಡು ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಆಗುತ್ತಿರುವ ಪ್ರಕರಣಗಳನ್ನು ಚುನಾವಣಾ
ಆಯೋಗಕ್ಕೆ ಕಳುಹಿಸಬೇಕು ಕರೆ ನೀಡಿದರು. ಈ ವೇಳೆ ಜಿಲ್ಲಾ ನೋಂದಣಾಧಿಕಾರಿ ಶ್ರೀದೇವಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರಾಜ್‌ ಕುಮಾರ್‌, ವಾಸಂತಿ ಉಪ್ಪಾರ್‌, ಗಾಯಿತ್ರಿ ಶ್ರೀನಿವಾಸ್‌ ಮತ್ತಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next