Advertisement

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಕೇರಳ ರಾಜ್ಯ

10:06 AM Jan 15, 2020 | Team Udayavani |

ತಿರುವನಂತಪುರಂ: ಪೌರತ್ವ ತಿದ್ದುಪಡಿ ಕಾಯ್ದೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಕೇರಳ ಇದೀಗ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಕೇಂದ್ರದ ನೂತನ ಪೌರತ್ವ ತಿದ್ದುಪಡಿ ಕಾಯ್ದೆ ಭಾರತೀಯ ಸಂವಿಧಾನ ನೀಡಿರುವ ಸಮಾನತೆ ಹಕ್ಕನ್ನು ಉಲ್ಲಂಘಿಸಿರುವುದಾಗಿ ಕೇರಳ ಸರ್ಕಾರ ತಿಳಿಸಿದೆ.

Advertisement

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಮೊದಲ ರಾಜ್ಯ ಕೇರಳವಾಗಿದೆ. ಸಿಎಎಯನ್ನು ಹಲವು ರಾಜ್ಯಗಳು ವಿರೋಧಿಸಿದ್ದವು. ಅಲ್ಲದೇ ಸಿಎಎ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಕೈಗೊಂಡ ಮೊದಲ ರಾಜ್ಯ ಕೂಡಾ ಕೇರಳ ಎಂಬುದಾಗಿ ವರದಿ ತಿಳಿಸಿದೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಎಲ್ ಡಿಎಫ್ ಸರ್ಕಾರ ಸಿಎಎ ಹಾಗೂ ಪಾಸ್ ಪೋರ್ಟ್ ಕಾಯ್ದೆ ಮತ್ತು ವಿದೇಶಿಯರ ಕಾಯ್ದೆಯನ್ನು ಪ್ರಶ್ನಿಸಿ ಸುಪ್ರೀಂನಲ್ಲಿ ದಾವೆ ಹೂಡಿದೆ ಎಂದು ವರದಿ ತಿಳಿಸಿದೆ.

ಸಿಎಎ 2019ರ ಕಾಯ್ದೆ ಸಂವಿಧಾನದ ಕಲಂ 14, 21 ಮತ್ತು 25 ಅನ್ನು ಉಲ್ಲಂಘಿಸಿರುವುದಾಗಿ ಘೋಷಿಸುವಂತೆ ಕೇರಳ ಸರ್ಕಾರ ಅರ್ಜಿಯಲ್ಲಿ ಮನವಿ ಮಾಡಿಕೊಂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next