Advertisement

ಸಿಎಎ: ಕಾಂಗ್ರೆಸ್‌ ಜನರ ದಾರಿ ತಪ್ಪಿಸುತ್ತಿದೆ

10:39 PM Jan 19, 2020 | Lakshmi GovindaRaj |

ದೇವನಹಳ್ಳಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದು ಪಡಿ ಕಾನೂನಿಂದ ದೇಶದ ಯಾವುದೇ ಮುಸಲ್ಮಾನರಿಗೆ ತೊಂದರೆ ಆಗುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕಂದಾಯ ಮತ್ತಪೌರಾಡಳಿತ ಸಚಿವ ಆರ್‌.ಅಶೋಕ್‌ ತಿಳಿಸಿದರು.

Advertisement

ನಗರದ ಗಿರಿಯಮ್ಮ ವೃತ್ತದಲ್ಲಿರುವ ಬಿ.ಆರ್‌ ಅಂಬೇಡ್ಕರ್‌ ಭವನದಲ್ಲಿ ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿ ವತಿಯಿಂದ ದೇವನಹಳ್ಳಿ ಮಂಡಲದ ನೂತನ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳ ಪದಗ್ರಹಣ ಸಮಾರಂಭ ಮತ್ತು ಬಿಜೆಪಿ ಕಾರ್ಯಕರ್ತರಿಗೆ ಸನ್ಮಾನ ಹಾಗೂ ವಿವಿಧ ಪಕ್ಷಗಳ ಮುಖಂಡರುಗಳ ಪಕ್ಷ ಸೇರ್ಪಡೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಹಲವು ವರ್ಷಗಳ ಪ್ರಯತ್ನ: ದೇಶದಲ್ಲಿ ಪೌರತ್ವ ಕಾಯಿದೆಗೆ ತಿದ್ದುಪಡಿ ತರಲು ಸುಮಾರು ವರ್ಷಗಳಿಂದ ಹಲವಾರು ನಾಯಕರು ಪ್ರಯತ್ನಿಸಿದ್ದಾರೆ.ಯುಪಿಎ ಅವಧಿ ಯಲ್ಲಿ ಪ್ರಧಾನಿಯಾಗಿದ್ದ ಮನಮೋಹನ್‌ ಸಿಂಗ್‌ ಅವರು ಪೌರತ್ವ ತಿದ್ದುಪಡಿಗೆ ಸಂಬಂಧಸಿದಂತೆ ಲೋಕ ಸಭೆಯಲ್ಲಿ ಮಾತ‌ನಾಡಿದ್ದರು ಎಂದು ತಿಳಿಸಿದರು. ಇದರ ಬಗ್ಗೆ ಕಾಂಗ್ರೆಸ್‌ ಹಾಗೂ ಎಡ ಪಕ್ಷಗಳು ದೇಶದ ಜನರ ದಾರಿ ತಪ್ಪಿಸುತ್ತಿದ್ದಾರೆ.

ಯಾರಿಗೂ ತೊಂದರೆ ಇಲ್ಲ: ಪೌರತ್ವ ತಿದ್ದುಪಡಿ ಕಾನೂನಿನ ಬಗ್ಗೆ ಪ್ರತಿಯೊಬ್ಬರೂ ತಿಳಿಯಬೇಕು. ಇದರಿಂದ ಯಾರಿಗೂ ತೊಂದರೆ ಆಗುವುದಿಲ್ಲ. ಪಾಕಿಸ್ತಾನ, ಆಫ್ಘಾನಿಸ್ಥಾನ, ಬಾಂಗ್ಲಾದೇಶಗಳಲ್ಲಿ ಹಿಂದೂಗಳು ಸೇರಿದಂತೆ ಇತರೆ ಅಲ್ಪಸಂಖ್ಯಾತರನ್ನು 2ನೇ ದರ್ಜೆಯ ಪ್ರಜೆಗಳಂತೆ ನಡೆಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು.

ಪಕ್ಷ ಸಂಘಟಿಸಿ: ಇತಿಹಾಸದಲ್ಲಿ ಮೊದಲ ಬಾರಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆದ್ದಿದೆ. ಹೊಸಕೋಟೆ ವಿಧಾನಸಭಾ ಉಪಚುನಾವಣೆಯಲ್ಲಿ ನಮ್ಮ ಪಕ್ಷದವರೆ ಚೂರಿ ಹಾಕಿದ್ದರಿಂದ ಅಲ್ಲಿ ನಮ್ಮ ಅಭ್ಯರ್ಥಿ ಸೋಲುವಂತಾಯಿತು.ಕೇಂದ್ರ ಹಾಗೂ ರಾಜ್ಯದಲ್ಲಿ ನಮ್ಮದೇ ಪಕ್ಷ ಅಧಿಕಾರದಲ್ಲಿದ್ದು, ಸರ್ಕಾರಗ ಅಭಿವೃದ್ಧಿ ಕಾರ್ಯಕ್ರಮಗಳು, ಯೋಜನೆಗಳ ಬಗ್ಗೆ ಜನರಿಗೆ ತಿಳಿಸಬೇಕು. ಸ್ವಾರ್ಥ, ಸ್ವಹಿತಾಸಕ್ತಿ ಬಿಟ್ಟು ಪಕ್ಷ ಸಂಘಟನೆ ಮಾಡಬೇಕು.

Advertisement

ಟಿಕೆಟ್‌ ಕೇಳಲು ಬರಬೇಡಿ: ಕೇವಲ ನಾಯಕರುಗಳ ಮನೆಗಳನ್ನು ಸುತ್ತಿಕೊಂಡು ಇದ್ದರೆ ಸಾಲದು, ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷವನ್ನು ತಳ ಮಟ್ಟದಿಂದ ಬಲಗೊಳಿಸಬೇಕು. ಮುಂದಿನ ಗ್ರಾಪಂ, ಜಿಪಂ , ತಾಪಂ , ಚುನಾವಣೆಗಳಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರಬೇಕು. ಇಲ್ಲವಾದರೆ, ವಿಧಾನಸಭಾ ಚುನಾವಣೆಯ ಟಿಕೇಟ್‌ ಕೇಳಲು, ನಮ್ಮ ಮನೆ ಬಾಗಲಿಗೆ ಯಾರೂ ಬರಬೇಡಿ ಎಂದರು.

ಬಜೆಟ್‌ ನಂತರ ಅಭಿವೃದ್ಧೀ ಪರ್ವ: ನೆರೆ ಹಾವಳಿ ಯಿಂದ ರಾಜ್ಯದ ಅಭಿವೃದ್ಧಿ ಕಾರ್ಯದಲ್ಲಿ ಒಂದಿಷ್ಟು ಹಿನ್ನಡೆಯಾಗಿದೆ.ಬಜೆಟ್‌ ನಂತರ ಅಭಿವೃದ್ಧಿ ಕಾರ್ಯಗಳು ಸಮಾರೋಪ ಹಾದಿಯಲ್ಲಿ ಸಾಗುತ್ತದೆ. ನೂತನ ಅಧ್ಯಕ್ಷರು, ಪದಾಧಿಕಾರಿಗಳು ಪಕ್ಷದ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ವಿದೇಶದಿಂದ ಬಂದ ನಂತರ ವಿಸ್ತರಣೆ: ಮುಖ್ಯ ಮಂತ್ರಿಗಳು ವಿದೇಶ ಪ್ರವಾಸಕ್ಕೆ ಹೋಗುತ್ತಿದ್ದು ಅವರು ಬಂದ ಕೂಡಲೇ ಸಚಿವ ಸಂಪುಟ ರಚನೆ ಆಗುತ್ತದೆ. ದೇವನಹಳ್ಳಿ ಮುಂದಿನ ಹತ್ತು ವರ್ಷದಲ್ಲಿ ಬೆಂಗಳೂರು ಸಿಟಿತಯಂತೆ ಬೆಳೆಯಲಿದೆ. ದೇವನಹಳ್ಳಿಗೆ ಸಾಕಷ್ಟು ಇತಿಹಾಸವಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೇವನಹಳ್ಳಿ ವಿಶ್ವದ ಗಮನ ಸೆಳೆದಿದೆ ಎಂದು ಹೇಳಿದರು.  ನೂತನ ದೇವನಹಳ್ಳಿ ಮಂಡಲ ಅಧ್ಯಕ್ಷ ಬೊಮ್ಮವಾರ ಸುನೀಲ್‌ ಮಾತನಾಡಿ, ಪಕ್ಷದ ಎಲ್ಲಾ ಕಾರ್ಯಕರ್ತರು ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಸಂಘಟನೆ ಮಾಡಲಾಗುವುದು ಎಂದರು.

ಮಾಜಿ ಶಾಸಕ ಜಿ.ಚಂದ್ರಣ್ಣ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಎಚ್‌.ಎಂ ರವಿಕುಮಾರ್‌, ಪ್ರಭಾಕರ್‌, ಬಿಜೆಪಿ ರಾಷ್ಟ್ರೀಯ ಪರಿಷತ್‌ ಸದಸ್ಯ ಎ.ಸಿ ಗುರುಸ್ವಾಮಿ, ಬಿಜೆಪಿ ರಾಜ್ಯ ಪರಿಷತ್‌ ಸದಸ್ಯ ದೇಸು ನಾಗರಾಜ್‌, ರಾಜ್ಯ ರೈತ ಮೋರ್ಚಾ ಮಾಜಿ ಉಪಾಧ್ಯಕ್ಷ ನಾರಾಯಣ ಗೌಡ, ತಾ.ಸೊಸೈಟಿ ಮಾಜಿ ಅಧ್ಯಕ್ಷ ನಾರಾಯಣಸ್ವಾಮಿ, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಕೆ.ನಾಗೇಶ್‌, ಜಿಲ್ಲಾ ಪ್ರ.ಕಾರ್ಯದರ್ಶಿ ನಾರಾಯಣಸ್ವಾಮಿ,

ರೈತ ಮೋರ್ಚಾ ಜಿಲ್ಲಾಧ್ಯಕ್ಷ ಎನ್‌.ರಾಜ ಗೋಪಾಲ್‌, ತಾಲೂಕು ಪ್ರಧಾನ ಕಾರ್ಯದರ್ಶಿಗಳಾದ ನೀಲೇರಿ ಮಂಜುನಾಥ್‌, ರವಿಕುಮಾರ್‌,ಮೇಳೆಕೋಟೆ ಗ್ರಾಪಂ ಉಪಾಧ್ಯಕ್ಷ ಚಿದಾನಂದ್‌, ಪುರಸಭಾ ಸದಸ್ಯೆ ಲಕ್ಷ್ಮೀ, ತಾ.ಮಹಿಳಾ ಘಟಕದ ಅಧ್ಯಕ್ಷೆ ನಾಗವೇಣಿ, ಪ್ರಧಾನ ಕಾರ್ಯದರ್ಶಿ ವಿಮಲಾ, ಜಿಲ್ಲಾ ಮಹಿಳಾ ಘಟಕದ ಪ್ರ.ಕಾರ್ಯದರ್ಶಿ ಗಾಯಿತ್ರಿ, ಎಸ್‌ ಟಿ ಮೂರ್ಚಾ ಜಿಲ್ಲಾಧ್ಯಕ್ಷ ಮುನಿ ಕೃಷ್ಣಪ್ಪ, ಶಿವಪ್ರಸಾದ್‌ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next