Advertisement

ಪೌರತ್ವ ಪ್ರತಿಭಟನೆ: ಉತ್ತರದ ಹಿಂಸೆಗೆ ಬಲಿಯಾದವರ ಸಂಖ್ಯೆ ಹತ್ತಕ್ಕೇರಿಕೆ

10:23 AM Dec 22, 2019 | keerthan |

ಲಕ್ನೋ: ಪೌರತ್ವ ಕಾಯ್ದೆ ವಿರೋಧಿಸಿ ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಹಿಂಸೆಗೆ ಬಲಿಯಾದವರ ಸಂಖ್ಯೆ ಹತ್ತಕ್ಕೇರಿದೆ.

Advertisement

ಫಿರೋಜಾಬಾದ್, ಕಾನ್ಪುರ್ , ಬಿಜ್ನೋರ್, ಸಂಬಾಲ್ ಮತ್ತು ಮೀರತ್ ನಲ್ಲಿ ತಲಾ ಇಬ್ಬರು ಸಾವನ್ನಪ್ಪಿದ್ದಾರೆ.

ಪ್ರತಿಭಟನೆಯು ಹಿಂಸಾರೂಪಕ್ಕೆ ತಿರುಗುತ್ತಿದ್ದಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ  ಯೋಗಿ ಆದಿತ್ಯನಾಥ್ ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.

ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ಸಿಎಂ ಯೋಗಿ ಆದಿತ್ಯನಾಥ್ ಜನರಲ್ಲಿ ಮನವಿ ಮಾಡಿದ್ದಾರೆ. ಹಿರಿಯ ಅಧಿಕಾರಿಗಳೊಂದಿಗೆ ಸಿಎಂ ಯೋಗಿ ಚರ್ಚೆ ನಡೆಸಿದ್ದು ಶಾಂತಿ ಕಾಪಾಡುವ ಬಗೆಗೆ ಮಾತುಕತೆ ನಡೆಸಿದ್ದಾರೆ.

ಉತ್ತರ ಪ್ರದೇಶದ ಬರೇಲಿ, ವಾರಣಾಸಿ, ಭದೋಹಿ, ಗೋರಖ ಪುರ್, ಸಾಂಬಾಲ್ ಮುಂತಾದ ಕಡೆಗಳಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಕಲಹಗಳಾದ ಬಗ್ಗೆ ವರದಿಯಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next