ಚಿಕ್ಕಮಗಳೂರು: ಕ್ಯಾಬ್ ಚಾಲಕನೋರ್ವ ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಸಿದ ಘಟನೆ ಕಡೂರು ತಾಲೂಕಿನ ಸಕ್ಕರಾಯಪಟ್ಟಣದ ಸಿದ್ದರಹಳ್ಳಿಯಲ್ಲಿ ಇಂದು ನಡೆದಿದೆ.
Advertisement
ಕ್ಯಾಬ್ ಚಾಲಕ ರಾಜಪ್ಪ ಕಡೂರಿನಿಂದ ಸಿದ್ದರಹಳ್ಳಿಗೆ ಕ್ಯಾಬ್ ನಲ್ಲಿ ಶಿಕ್ಷಕಿಯರನ್ನ ಕರೆತರುತ್ತಿದ್ದು, ಬೆಳಗ್ಗೆಯಿಂದ ಸಂಜೆವರೆಗೂ ಶಾಲೆ ಬಳಿಯೇ ಇರುತ್ತಿದ್ದ ಎನ್ನಲಾಗಿದೆ. ಈತನನ್ನು ಗ್ರಾಮಸ್ಥರು ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ.
ಸಖರಾಯಪಟ್ಣಣ ಪೊಲೀಸ್ ಠಾಣೆಯಲ್ಲಿ ಈತನ ಮೇಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.