Advertisement

ಸಂಕ್ರಾಂತಿ ಮುಗಿಯುವವರೆಗೆ ಸಂಪುಟ ವಿಸ್ತರಣೆ ನಡೆಯುವುದು ಅನುಮಾನ

11:45 PM Jan 02, 2021 | Team Udayavani |

ಬೆಂಗಳೂರು: ಬಹು ನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಕುರಿತು ಶಿವಮೊಗ್ಗದಲ್ಲಿ ಶನಿವಾರ ನಡೆದ ರಾಜ್ಯ ಬಿಜೆಪಿ ಕೋರ್‌ ಕಮಿಟಿ ಸಭೆಯಲ್ಲಿ ಚರ್ಚೆ ನಡೆಯದಿರುವುದರಿಂದ ಸದ್ಯ ಸಂಪುಟ ವಿಸ್ತರಣೆ ಮಾಡುವುದು ಅನುಮಾನ ವಾಗಿದೆ.

Advertisement

ಜಿಲ್ಲಾ ಮತ್ತು ತಾಲೂಕು ಪಂಚಾಯತ್‌ ಚುನಾವಣೆ ಹಾಗೂ ಮುಂಬರುವ ಉಪ ಚುನಾವಣೆ ಸಿದ್ಧತೆ ಕುರಿತು ಸಭೆಯಲ್ಲಿ ಚರ್ಚೆಗೆ ಆದ್ಯತೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಗ್ರಾಮ ಪಂಚಾಯತ್‌ ಚುನಾವಣೆ ಮುಕ್ತಾಯವಾಗಿದ್ದರಿಂದ ಜಂಟಿ ಅಧಿವೇಶನಕ್ಕೂ ಮುನ್ನವೇ ಸಚಿವ ಸಂಪುಟ ವಿಸ್ತರಣೆ ಮಾಡಬೇಕೆಂಬ ಒತ್ತಡವಿದ್ದರೂ ಸಂಕ್ರಾಂತಿ ಮುಗಿಯುವವರೆಗೆ ಸಂಪುಟ ವಿಸ್ತರಣೆ ನಡೆಯುವುದು ಅನುಮಾನ ಎಂಬ ಮಾತುಗಳು ಕೇಳಿಬರುತ್ತಿವೆ.

Advertisement

Udayavani is now on Telegram. Click here to join our channel and stay updated with the latest news.

Next