Advertisement

ಆ. 16ರ ಬಳಿಕ ಸಂಪುಟ ವಿಸ್ತರಣೆ: ಯಡಿಯೂರಪ್ಪ

12:30 AM Aug 13, 2019 | Sriram |

ಮಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಆ. 16ರ ಬಳಿಕ ನಡೆಯಲಿದೆ. ಈ ಬಗ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ಶಾ ಜತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದ್ದಾರೆ.

Advertisement

ದಕ್ಷಿಣ ಕನ್ನಡದಲ್ಲಿ ಮಳೆಹಾನಿ ಪರಿಶೀಲನೆಗೆ ಸೋಮವಾರ ಆಗಮಿಸಿದ ಸಂದರ್ಭದಲ್ಲಿ ಅವರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದರು.

ಮೀನುಗಾರರ ಸಾಲ ಮನ್ನಾ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಮೀನುಗಾರರ ಪರವಾಗಿ ಮಹಿಳಾ ಮೀನುಗಾರರ ಪ್ರತಿನಿಧಿಗಳು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಮ್ಮ ಪ್ರತೀಕವಾದ ದೋಣಿಯ ಸ್ಮರಣಿಕೆಯನ್ನು ನೀಡಿ ಗೌರವಿಸಿ ಅಭಿನಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next