Advertisement

ದೀಪಾವಳಿ ನಂತರ‌ ಸಚಿವ ಸಂಪುಟ ವಿಸ್ತರಣೆ: ಸಿ.ಟಿ ರವಿ

04:22 PM Nov 14, 2020 | keerthan |

ಚಿಕ್ಕಮಗಳೂರು: ಪಕ್ಷದ ವರಿಷ್ಠರು ಬಿಹಾರದ ವಿದ್ಯಮಾನಗಳಲ್ಲಿ ನಿರತರಾಗಿರುವ ಕಾರಣ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ದೆಹಲಿ ಭೇಟಿ ಸಾಧ್ಯವಾಗಿಲ್ಲ‌. ದೀಪಾವಳಿ ಹಬ್ಬದ ನಂತರ ಮುಖ್ಯಮಂತ್ರಿಯವರು ದೆಹಲಿಗೆ ಭೇಟಿ ನೀಡಿ ವರಿಷ್ಠರನ್ನು ಭೇಟಿಯಾಗುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ‌ ಕಾರ್ಯದರ್ಶಿ ಸಿ.ಟಿ‌.ರವಿ ಹೇಳಿದರು.

Advertisement

ಚಿಕ್ಕಮಗಳೂರಿನ ದೇವಿರಮ್ಮನ ಬೆಟ್ಟಕ್ಕೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಹಬ್ಬದ ಬಳಿಕ ಸಂಪುಟ ಪುನರ್ ರಚನೆ ಅಥವಾ ವಿಸ್ತರಣೆ ಮಾಡುವ ಯೋಚನೆ ಮುಖ್ಯಮಂತ್ರಿಗಳಿಗಿದೆ ಎಂದರು.

ಚಿಕ್ಕಮಗಳೂರು ಜಿಲ್ಲೆಗೆ ಮಂತ್ರಿ ಸ್ಥಾನ ನೀಡುವುದು ಸಿಎಂ ಬಿಎಸ್ ವೈ ಅವರ ರ್ತೀಮಾನ , ಅದನ್ನ ನಾನು ಹೇಳಲಾಗದು ಎಂದರು.

ಪಕ್ಷ ಮಹಾರಾಷ್ಟ್ರ, ಗೋವಾ, ತಮಿಳುನಾಡಿನ ಉಸ್ತುವಾರಿ ನೀಡಿದೆ. ಪಕ್ಷ ನೀಡಿರುವ ಜವಾಬ್ದಾರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತೇನೆ ಎಂದ ಅವರು, ಅಯ್ಯೋಧ್ಯೆಯಲ್ಲಿ‌ 500 ವರ್ಷಗಳ ನಂತರ ಸಂಭ್ರಮ ಮನೆ ಮಾಡಿದೆ. ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ಒಳ್ಳೆ ಕೆಲಸ ನಡೆಯುತ್ತಿದೆ. ಇದೊಂದು ಶುಭ ಸಂಕೇತ, ಅಯೋಧ್ಯೆಯಲ್ಲಿ ಅಯೋಧ್ಯೆಯ ಗತ ವೈಭವ ಮರುಕಳಿಸಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next