Advertisement

ಸ್ವಿಸ್‌ ಪ್ರವಾಸದ ಬಳಿಕ ಸಂಪುಟ ವಿಸ್ತರಣೆ ಸಾಧ್ಯತೆ

11:05 PM Jan 14, 2020 | Lakshmi GovindaRaj |

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್‌ ಶಾ ರಾಜ್ಯ ಪ್ರವಾಸ ಸಂದರ್ಭದಲ್ಲೇ ಸಂಪುಟ ವಿಸ್ತರಣೆಗೆ ಒಪ್ಪಿಗೆ ಪಡೆಯಬೇಕಾದ ಅನಿವಾರ್ಯತೆಯಿದ್ದು, ಮರುದಿನವೇ ಮುಖ್ಯ ಮಂತ್ರಿಗಳು ಸ್ವಿಸ್‌ ಪ್ರವಾಸ ಕೈಗೊಳ್ಳಬೇಕಿರುವುದರಿಂದ ಸಂಪುಟ ವಿಸ್ತರಣೆ ಮಾಸಾಂತ್ಯಕ್ಕೆ ಮುಂದೂಡಿಕೆ ಯಾಗುವ ಸಾಧ್ಯತೆ ಹೆಚ್ಚಾಗಿದೆ.

Advertisement

ಸದ್ಯದ ಮಾಹಿತಿ ಪ್ರಕಾರ ಅಮಿತ್‌ ಶಾ ಜ.18ರ ಬೆಳಗ್ಗೆ ಬೆಂಗಳೂರಿಗೆ ಭೇಟಿ ನೀಡಲಿದ್ದು, ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ನಂತರ ಹುಬ್ಬಳ್ಳಿಯ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಆ ದಿನ ಸಮಾರಂಭ ವಿಳಂಬವಾದರೆ ರಾತ್ರಿ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಹೂಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಅಮಿತ್‌ ಶಾ ಅವರು ಜ.18ರ ಬೆಳಗ್ಗೆ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸಿಎಂಗೆ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲು ಸಮಯಾವಕಾಶ ಸಿಗುವುದೇ ಎಂಬ ಪ್ರಶ್ನೆ ಮೂಡಿದೆ. ಏಕೆಂದರೆ ಹುಬ್ಬಳ್ಳಿ ಕಾರ್ಯಕ್ರಮ ಮುಗಿದ ಬಳಿಕ ಯಡಿಯೂರಪ್ಪ ಬೆಂಗಳೂರಿಗೆ ಹಿಂತಿರುಗಿ ಜ.19ರ ಬೆಳಗ್ಗೆ 10.45ಕ್ಕೆ ಸ್ವಿಸ್‌ ಪ್ರವಾಸ ಕೈಗೊಳ್ಳಬೇಕಿದೆ. ಒಂದೊಮ್ಮೆ ಸಂಪುಟ ವಿಸ್ತರಣೆಗೆ ಅಮಿತ್‌ ಶಾ ಅವರ ಒಪ್ಪಿಗೆ ಪಡೆದರೂ ನೂತನ ಸಚಿವರಿಗೆ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಆಯೋಜಿಸುವುದು ಕಷ್ಟಸಾಧ್ಯವೆನಿಸಿದೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷರೊಂದಿಗೆ ಚರ್ಚಿಸಿದ ನಂತರವೇ ಮುಂದುವರಿಯುವುದಾಗಿ ಸಿಎಂ ಹೇಳಿರುವುದರಿಂದ ಸಂಪುಟ ವಿಸ್ತರಣೆ ಬಗ್ಗೆ ತರಾತುರಿಯ ತೀರ್ಮಾನ ಸಾಧ್ಯವಾಗದು. ಹಾಗಾಗಿ ಸಿಎಂ ಸ್ವಿಸ್‌ ಪ್ರವಾಸದ ಬಳಿಕ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಹೆಚ್ಚಾಗಿದೆ ಎಂದು ಬಿಜೆಪಿ ಹಿರಿಯ ನಾಯಕರೊಬ್ಬರು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next