Advertisement

ಸಂಪುಟ ವಿಸ್ತರಣೆಗೆ ಶೀಘ್ರದಲ್ಲೇ ದೆಹಲಿಗೆ: ಸಿಎಂ ಬಸವರಾಜ ಬೊಮ್ಮಾಯಿ

11:46 AM Oct 22, 2022 | Team Udayavani |

ಚಿತ್ರದುರ್ಗ: ಶೀಘ್ರದಲ್ಲೇ ದೆಹಲಿಗೆ ಹೋಗುತ್ತೇನೆ. ಸಚಿವ ಸಂಪುಟ ವಿಸ್ತರಣೆಯೋ, ಪುನಾರಚನೆಯೋ ಎನ್ನುವುದನ್ನು ಮುಂದೆ ತಿಳಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Advertisement

ಹೊಸದುರ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಚಿತ್ರದುರ್ಗ ಜಿಲ್ಲೆಯ ಮಹತ್ಚದ ಭದ್ರಾ ಮೇಲ್ದಂಡೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಪರಿವರ್ತಿಸಲು ನಿರಂತರವಾಗಿ ಕೇಂದ್ರದ ಜೊತೆ ಸಂಪರ್ಕದಲ್ಲಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಈಗಾಗಲೇ ಕೇಂದ್ರ ಜಲಶಕ್ತಿ ಆಯೋಗದಿಂದ ಒಪ್ಪಿಗೆ ದೊರೆತಿದೆ. ನೀರಾವರಿ ಸಚಿವರು ಗಮನಿಸುತ್ತಿದ್ದಾರೆ ಎಂದರು. ಇದು ರಾಜ್ಯದ ಮೊದಲ ನೀರಾವರಿ ಯೋಜನೆ ಆಗಲಿದೆ ಎಂದು ಹೇಳಿದರು.

ಇದನ್ನೂ ಓದಿ:ಲೈಂಗಿಕ ತಜ್ಞೆ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ: ಅಶ್ಲೀಲ ಚಿತ್ರ ಕಳುಹಿಸಿ ಕಿರುಕುಳ;ಸೆರೆ

ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗಕ್ಕೆ ಆದಷ್ಟು ಬೇಗ ಅಡಿಗಲ್ಲು ಹಾಕಲಾಗುವುದು. ಅಗತ್ಯವಿರುವ 100 ಕೋಟಿ ರೂ. ಅನುದಾನ ಒದಗಿಸುತ್ತೇನೆ ಎಂದು ಭರವಸೆ ನೀಡಿದರು.

Advertisement

ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಮಾತನಾಡಿ, ಜಿಲ್ಲೆಯಲ್ಲಿ ಶೇ.70 ರಷ್ಟು ಮಳೆ ಹೆಚ್ಚಾಗಿದೆ. ಹಿಂಗಾರು ಬೆಳೆ ಹಾನಿ 34 ಕೋಟಿ‌ ರೂ. ಪ್ರಸ್ತಾವನೆ ಸಲ್ಲಿಸಲಾಗಿದೆ. 83693 ಹೆಕ್ಟೇರ್ ಬೆಳೆ ನಷ್ಟ ಆಗಿದೆ ಎಂದರು.

ಎಸ್ಸಿ, ಎಸ್ಟಿ ಮೀಸಲಾತಿ ಕಾರಣಕ್ಕೆ ಸ್ವಾಮೀಜಿ ಧರಣಿ ಕುಳಿತಿದ್ದರು. ನಮ್ಮ ಸರ್ಕಾರ ಸ್ಪಂದಿಸಿ, ಪರಿಶಿಷ್ಟರ ಮೀಸಲಾತಿಗೆ ಇಚ್ಛಾಶಕ್ತಿ ಇದ್ದಿದ್ದಕ್ಕೆ ಮಾಡಿದ್ದೇವೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next