Advertisement

ಸರ್ಕಾರ ಪತನ ಭೀತಿಯಿಂದ ಸಂಪುಟ ವಿಸ್ತರಣೆ ಆಗುತ್ತಿಲ್ಲ: ಶೆಟ್ಟರ್‌

06:05 AM Dec 06, 2018 | Team Udayavani |

ಬೆಳಗಾವಿ: ಸಂಪುಟ ವಿಸ್ತರಣೆ ಮಾಡಿದ ದಿನವೇ ಸರಕಾರ ಪತನವಾಗುತ್ತದೆ ಎಂಬುದು ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಾಯಕರಿಗೆ ಗೊತ್ತಿದೆ. ಇದೇ ಕಾರಣದಿಂದ ಸಂಪುಟ ವಿಸ್ತರಣೆ ಮಾಡುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಹೇಳಿದರು.

Advertisement

ನಗರದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಮ್ಮಿಶ್ರ ಸರಕಾರದಲ್ಲಿ ಬಹಳ ಅಸಮಾಧಾನ ಇದೆ. ಹೀಗಾಗಿ, ಸಂಸತ್‌ ಚುನಾವಣೆವರೆಗೆ ಸಂಪುಟ ವಿಸ್ತರಣೆ ನಡೆಯುವುದಿಲ್ಲ. ಈ ಸರ್ಕಾರ ಅಧಿಕಾರ ಸ್ವೀಕಾರ ಮಾಡಿದಾಗಿನಿಂದಲೂ ಅಸಮಾಧಾನ ಕೇಳಿ ಬರುತ್ತಲೇ ಇದೆ. ನಮ್ಮ ಕ್ಷೇತ್ರಗಳಿಗೆ ಅನುದಾನ ಬರುತ್ತಿಲ್ಲ ಎಂದು ಕಾಂಗ್ರೆಸ್‌ ಶಾಸಕರೇ ನೇರ ಆರೋಪ ಮಾಡಿದ್ದಾರೆ. 

ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಪ್ರಯತ್ನ ಮಾಡಿದರೂ ಅವರು ನಮಗೆ ಸಿಗುತ್ತಿಲ್ಲ ಎಂಬ ಅಸಮಾಧಾನವನ್ನು ಕಾಂಗ್ರೆಸ್‌ ಶಾಸಕರು ಹೊರಹಾಕಿದ್ದಾರೆ. ಇದು ಸರ್ಕಾರದಲ್ಲಿನ ಭಿನ್ನಮತ ತೋರಿಸುತ್ತದೆ ಎಂದರು.

ಸರ್ಕಾರ ಕೇವಲ ಮೈಸೂರು ಭಾಗದ ಐದು ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿದೆ. ಮುಖ್ಯಮಂತ್ರಿಗಳು ಉತ್ತರ ಕರ್ನಾಟಕವನ್ನು ಸಂಪೂರ್ಣ ನಿರ್ಲಕ್ಷé ಮಾಡಿದ್ದಾರೆ. ಸರಕಾರದ ಈ ಧೋರಣೆ ಖಂಡಿಸಿ ಬಿಜೆಪಿ ವತಿಯಿಂದ ಡಿ.10ರಂದು ಬೆಳಗಾವಿಯಲ್ಲಿ ಬೃಹತ್‌ ಸಮಾವೇಶ ನಡೆಸಲಾಗುತ್ತಿದೆ. ಲಕ್ಷಾಂತರ ಕಾರ್ಯಕರ್ತರು ಹಾಗೂ ರೈತರು ಈ ಸಮಾವೇಶದಲ್ಲಿ ಭಾಗವಹಿಸಿ ಸರಕಾರಕ್ಕೆ ಎಚ್ಚರಿಕೆ ಸಂದೇಶ ರವಾನಿಸಲಿದ್ದಾರೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next