Advertisement

ಸಂಪುಟ ವಿಸ್ತರಣೆ ವರಿಷ್ಠರ ತೀರ್ಮಾನವೇ ಅಂತಿಮ: ಜಗದೀಶ ಶೆಟ್ಟರ್

09:08 PM Jan 08, 2023 | Team Udayavani |

ಹುಬ್ಬಳ್ಳಿ: ಸಂಪುಟ ವಿಸ್ತರಣೆ ಕುರಿತು ಮುಖ್ಯಮಂತ್ರಿ ಹಾಗೂ ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟದಲ್ಲಿ ಆರು ಸ್ಥಾನಗಳು ಖಾಲಿ ಇವೆ. ವಿಸ್ತರಣೆ ಕುರಿತು ಹೆಚ್ಚು ಮಾತನಾಡುವುದಿಲ್ಲ. ಅವಳಿ ನಗರದ ಕುಡಿಯುವ ನೀರು ಸರಬರಾಜು ಕುರಿತು ಇನ್ನೊಂದು ಸಭೆ ನಡೆಸುವ ಮೂಲಕ ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡ ನಂತರ ನಿರ್ಧಾರ ತಿಳಿಸಲಾಗುವುದು.

ಅವಳಿ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಕ್ರಮ ಕೈಗೊಳ್ಳುವಂತೆ ಎಲ್‌ ಆ್ಯಂಡ್‌ ಟಿ ಕಂಪನಿಗೆ ಈಗಾಗಲೇ ಎಚ್ಚರಿಕೆ ನೀಡಲಾಗಿದೆ.

ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಜತೆಗೆ ಶೀಘ್ರ ಸಭೆ ನಡೆಸಲಾಗುವುದು. ಎಲ್‌ ಆ್ಯಂಡ್‌ ಟಿ ಕಂಪನಿಗೆ ನೀಡಿದ ಗಡುವು ಮುಗಿದಿದೆ. ಸಭೆ ನಂತರ ಏನೆಲ್ಲಾ ಕ್ರಮ ಕೈಗೊಳ್ಳಬೇಕೋ ಕೈಗೊಳ್ಳಲಾಗುವುದು. ಅದಕ್ಕಾಗಿ ಇನ್ನು ಹತ್ತು ದಿನ ಕಾಯುತ್ತೇವೆ. ಎಲ್‌ ಆ್ಯಂಡ್‌ ಟಿಗೆ ಕಡೆಯ ಎಚ್ಚರಿಕೆ ಇದಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next